LATEST NEWS
ಅಕ್ರಮವಾಗಿ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಕಳ್ಳಭಟ್ಟಿ ವಶ- ಮೂರು ಮಂದಿಯ ಸೆರೆ
ಅಕ್ರಮವಾಗಿ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಕಳ್ಳಭಟ್ಟಿ ವಶ- ಮೂರು ಮಂದಿಯ ಸೆರೆ
ಮಂಗಳೂರು ನವೆಂಬರ್ 03: ನಗರದ ಕೊಣಾಜೆ ಅಂಬ್ಲಮೊಗರು ಗ್ರಾಮದ ಎಲಿಯಾರ್ ಪದವು ಎಂಬಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಹಾಗೂ ದಾಸ್ತಾನು ಇರಿಸಿದ್ದ ಕಳ್ಳ ಭಟ್ಟಿ ಸಾರಾಯಿಯನ್ನು ಮಂಗಳೂರು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದು 3 ಮಂದಿಯನ್ನು ಬಂಧಿಸಿದ್ದಾರೆ.
ಮಂಗಳೂರು ನಗರದ ಕೊಣಾಜೆ ಯ ಅಂಬ್ಲಮೊಗರು ಗ್ರಾಮದ ಎಲಿಯಾರ್ ಪದವು ಎಂಬಲ್ಲಿ ಕಾರೊಂದರಲ್ಲಿ ಅಕ್ರಮವಾಗಿ ಕಳ್ಳಭಟ್ಟಿ ಯನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮಾಹಿತಿ ಸಿಸಿಬಿ ಪೊಲೀಸರಿಗೆ ದೊರೆತಿತ್ತು. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಸಿಸಿಬಿ ಪೊಲೀಸರು ಎಲಿಯಾರ್ ಪದವು ಎಂಬಲ್ಲಿ ಮಾರುತಿ ಸ್ಟಿಪ್ಟ್ ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಕಳ್ಳಭಟ್ಟಿ ಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಾರಿನಲ್ಲಿದ್ದ 3 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಅಂಬ್ಲಮೊಗರು ಗ್ರಾಮದ ನಿವಾಸಿ ಡೆನ್ಜಿಲ್ ವಿಕ್ಸನ್ ಡಿಸೋಜಾ( 28), ಕೊಣಾಜೆ ನಿವಾಸಿ ಮೋಹನ್ ದಾಸ್ (36 ),ಮುನ್ನೂರು ಗ್ರಾಮ ನಿವಾಸಿ ಬೋಜ ಕೊಟ್ಟಾರಿ(50) ಎಂದು ಗುರುತಿಸಲಾಗಿದೆ.
ಕಾರಿನಲ್ಲಿ ಹಾಗೂ ಬಾಡಿಗೆ ಮನೆಯೊಂದರಲ್ಲಿ ಅಡಗಿಸಿ ಇಡಲಾಗಿದ್ದ ತಲಾ 35 ಲೀಟರ್ ನ 10 ಕ್ಯಾನ್ ಗಳಲ್ಲಿ ದಾಸ್ತಾನು ಇರಿಸಿದ್ದ ಒಟ್ಟು 350 ಲೀಟರ್ ಕಳ್ಳ ಭಟ್ಟಿ , 4 ಮೊಬೈಲ್ ಫೋನ್ ಗಳು ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಮಾರುತಿ ಸ್ವಿಪ್ಟ್ ಕಾರನ್ನು ಪೊಲೀಸರು ವಶಪಡಿಸಿ ಕೊಂಡಿದ್ದಾರೆ.
ಆರೋಪಿಗಳಿಂದ ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 7,02,900 ರೂಪಾಯಿ ಎಂದು ಅಂದಾಜಿಸಲಾಗಿದೆ.
Facebook Comments
You may like
ಆನೆಗೆ ಬೆಂಕಿ ಇಟ್ಟ ಪಾಪಿಗಳು! ಸುಟ್ಟ ನೋವು ತಾಳಲಾರದೆ ಆನೆ ಸಾವು
ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಅನುಗ್ರಹದಿಂದ ಈ ದಿನದ ರಾಶಿಗಳ ಫಲಾಫಲವನ್ನು ತಿಳಿಯೋಣ.
ಪೂಜೆಯಲ್ಲಿ ಪಾಲ್ಗೊಂಡಿದ್ದ ಮೊಯ್ದಿನ್ ಬಾವಾರಿಗೆ ಜೀವ ಬೆದರಿಕೆ…!
ಧರ್ಮಬೋಧಕನಿಂದ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ
ಕಾಳಿದೇವಿಯ ಮಂತ್ರ ಪಠಣ ಪ್ರಯೋಜನ.
ಶ್ರೀ ರಾಘವೇಂದ್ರ ಸ್ವಾಮಿಯ ಅನುಗ್ರಹದಿಂದ ಈ ದಿನದ ರಾಶಿ ಫಲಾಫಲವನ್ನು ತಿಳಿಯೋಣ.
You must be logged in to post a comment Login