Connect with us

LATEST NEWS

ಉಳ್ಳಾಲ ಠಾಣಾ ವ್ಯಾಪ್ತಿಯ ಅಸ್ಟಿನ್ ಎಂಬ ಯುವಕನ ಕೊಲೆ ಯತ್ನ ಪ್ರಕರಣ: 4 ಮಂದಿ ಆರೋಪಿಗಳ ಸೆರೆ

WhatsApp Image 2017-07-12 at 8.25.20 PM WhatsApp Image 2017-07-12 at 8.25.19 PM WhatsApp Image 2017-07-12 at 8.25.21 PM WhatsApp Image 2017-07-12 at 8.25.21 PM (1)ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಅಜಾದ್ ನಗರದಲ್ಲಿ ಯುವಕನೊಬ್ಬನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಬಂಧಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.

ಪ್ರಕರಣದ ವಿವರ

ದಿನಾಂಕ: 11-07-2017 ರಂದು ಅಸ್ಟಿಮ್ ನಿತೇಶ್ ಮೊಂತೆರೋ ಎಂಬವರು ಉಳ್ಳಾಲ ಅಜಾದ್ ನಗರದ ಕಿರಿದಾದ ರಸ್ತೆಯಲ್ಲಿ ಅವರ ರಿಕ್ಷಾ ಟೆಂಪೋವನ್ನು ನಿಲ್ಲಿಸಿ ಟೆಂಪೋ ರಿಕ್ಷಾದಿಂದ ಮಣ್ಣಿನ ಲೋಡನ್ನು ಖಾಲಿ ಮಾಡುತ್ತಿದ್ದ ಸಮಯ ಅದೇ ರಸ್ತೆಯಿಂದಾಗಿ ಬಂದ ಕಪ್ಪು ಬಣ್ಣದ ಕಾರೊಂದರಲ್ಲಿ 4 ಮಂದಿ ವ್ಯಕ್ತಿಗಳು ಟೆಂಪೋ ರಿಕ್ಷಾವನ್ನು ರಸ್ತೆಯಿಂದ ತೆಗೆಯುವಂತೆ ಜೋರು ಮಾಡಿ ನಂತರ ರಿಕ್ಷಾಕ್ಕೆ ಅಡ್ಡ ನಿಂತು ಅವರಿಗೆ ಕೈಯಿಂದ ಹಲ್ಲೆ ನಡೆಸಿರುವುದಲ್ಲದೇ ಅವರ ಕಾರಿನ ಸೀಟಿನಲ್ಲಿದ್ದವನು ಕಾರಿನಿಂದ ಚೂರಿಯೊಂದನ್ನು ತೆಗೆದುಕೊಂಡು ಬಂದು ಅಸ್ಟಿಮ್ ನಿತೇಶ್ ಮೊಂತೆರೋ ರವರಿಗೆ ಚೂರಿಯಿಂದ ಕೈಗೆ ಇರಿದು, ನಂತರ ಎದೆಗೆ ಇರಿಯಲು ಪ್ರಯತ್ನಿಸಿದ ಸಮಯ ಅಸ್ಟಿಮ್ ನಿತೇಶ್ ಮೊಂತೆರೋ ರವರು ಅವರಿಂದ ಓಡಿ ತಪ್ಪಿಸಿಕೊಂಡಿದ್ದರು. ಗಾಯಗೊಂಡ ಅಸ್ಟಿಮ್ ನಿತೇಶ್ ಮೊಂತೆರೋ ರವರು ಉಳ್ಳಾಲದ ಸರೋಜ್ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆಯಲ್ಲಿರುತ್ತಾರೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ.

ಈ ಕೃತ್ಯದ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಆರೋಪಿಗಳು ಉಪಯೋಗಿಸಿದ ಕಾರಿನ ಬಗ್ಗೆ ಮಾಹಿತಿ ಪಡೆದು ಈ ಕೃತ್ಯದಲ್ಲಿ ಭಾಗಿಯಾದ ಆರೋಪಿಗಳ ತಲಾಷೆಯಲ್ಲಿದ್ದ ಸಮಯ ಆರೋಪಿಗಳು ಈ ಕೊಲೆ ಯತ್ನ ಕೃತ್ಯದಲ್ಲಿ ಭಾಗಿಯಾಗಿ ಮೈಸೂರು ಕಡೆಗೆ ಹೋಗುತ್ತಿದ್ದ ಮಾಹಿತಿಯನ್ನು ಪಡೆದು ಈ ದಿನ ದಿನಾಂಕ: 12-07-2017 ರಂದು ಸುಳ್ಯ ಕಲ್ಲುಗುಂಡಿ ಎಂಬಲ್ಲಿಂದ ವಶಪಡೆದುಕೊಳ್ಳಲಾಗಿದೆ.
1. ಜಲಾಲ್ @ ಜಲಾಲುದ್ದೀನ್, ಪ್ರಾಯ(28), ತಂದೆ: ದಿ: ಯೂಸುಫ್, ವಾಸ: ಜಲಾಲ್ ಮಂಜಿಲ್, ಮೇಲಂಗಡಿ, ಉಳ್ಳಾಲ, ಮಂಗಳೂರು.
2. ಅರ್ಫಾನ್ @ ಅಪ್ಪು, ಪ್ರಾಯ(25), ತಂದೆ: ಮೊಯಿದ್ದೀನ್, ವಾಸ: ಕುಂಪಳ ಶಾಲೆಯ ಬಳಿ, ಸೋಮೇಶ್ವರ ಗ್ರಾಮ, ಮಂಗಳೂರು.
3. ಜಾಫರ್ ಸಾದಿಕ್, ಪ್ರಾಯ(20), ತಂದೆ: ಅಬ್ಬಾಸ್, ವಾಸ: ಕೆ.ಎಸ್ ಮಂಜಿಲ್, ಅಕ್ಕರೆಕೆರೆ, ಟಿ.ಸಿ ರೋಡ್, ಉಳ್ಳಾಲ, ಮಂಗಳೂರು.
4. ಮುಝಂಬಿಲ್, ಪ್ರಾಯ(22), ತಂದೆ: ಹಸೈನಾರ್, ವಾಸ: ಮುಲ್ಲುಗುಡ್ಡೆ, ಕೆ.ಸಿ ರೋಡ್, ತಲಪಾಡಿ, ಮಂಗಳೂರು.

ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಉಪಯೋಗಿಸಿದ KA19 P 2360 ಕಪ್ಪು ಬಣ್ಣದ ಮಾರುತಿ ಅಲ್ಟೋ ಕಾರು ಹಾಗೂ ಪರಾರಿಯಾಗಲು ಉಪಯೋಗಿಸಿದ KA19 MD 5331 ನೇ ಮಾರುತಿ ಅಲ್ಟೋ 800 ಕಾದನ್ನು ವಶಪಡಿಸಿಕೊಂಡು ಮುಂದಿನ ಕ್ರಮಕ್ಕಾಗಿ ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

ಪೊಲೀಸ್ ಕಮೀಷನರ್ ಶ್ರೀ ಟಿ. ಆರ್ ಸುರೇಶ್ ರವರ ಆದೇಶದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿ.ಸಿ.ಪಿ ಶ್ರೀ.ಕೆ.ಎಂ. ಶಾಂತರಾಜು, ಹಾಗೂ ಅಪರಾಧ ಹಾಗೂ ಸಂಚಾರ ವಿಭಾಗದ ಡಿ.ಸಿ.ಪಿ ಯವರಾದ ಶ್ರೀ ಹನುಮಂತರಾಯ ಮತ್ತು ಎಸಿಪಿ ಸಿಸಿಬಿ ಬಿ ಶ್ರೀ ವೆಲೆಂಟೈನ್ ಡಿ ಸೋಜಾ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಇನ್ಸ್ ಪೆಕ್ಟರ್ ಸುನೀಲ್ ವೈ ನಾಯ್ಕ್ ಮತ್ತು ಪಿ.ಎಸ್.ಐ ಶ್ಯಾಮ್ ಸುಂದರ್ ಹಾಗೂ ಸಿಬ್ಬಂದಿಗಳು ಪತ್ತೆಕಾರ್ಯದಲ್ಲಿ ಭಾಗವಹಿಸಿದ್ದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *