Connect with us

    DAKSHINA KANNADA

    “ಎಲ್ಲಾ ‘ಗ್ಯಾರಂಟಿ’ಗಳನ್ನು 6 ತಿಂಗಳಲ್ಲಿ ಜಾರಿಗೊಳಿಸಿ ದಾಖಲೆ ಬರೆದಿದ್ದೇವೆ, ಬಿಜೆಪಿ ಪ್ರಣಾಳಿಕೆಯಲ್ಲಿದ್ದ ಎಷ್ಟು ಭರವಸೆ ಈಡೇರಿದೆ..?”

    ಮಂಗಳೂರು : ಅಧಿಕಾರಕ್ಕೆ ಬಂದು ಕೇವಲ 6 ತಿಂಗಳ ಅವಧಿಯಲ್ಲಿ ತಮ್ಮ ಸರ್ಕಾರ ಎಲ್ಲ ಗ್ಯಾರಂಟಿಗಳನ್ನು ಜಾರಿಗೊಳಿಸಿ ದಾಖಲೆ ಬರೆದಿದ್ದೇವೆ. ಬಿಎಸ್ ಯಡಿಯೂರಪ್ಪ ಅವರು ಬಿಜೆಪಿ ಪ್ರಣಾಳಿಕೆಯಲ್ಲಿದ್ದ ಎಷ್ಟು ಭರವಸೆಗಳನ್ನು ಈಡೇರಿಸಿದರು ಅಂತ ಅವರನೊಮ್ಮೆ ಕೇಳಿದರೆ ಕಾಂಗ್ರೆಸ್ ಸರ್ಕಾರದ ಸಾಧನೆ ಗೊತ್ತಾಗುತ್ತದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

    ಮಂಗಳೂರಿನಲ್ಲಿ ಮಾತನಾಡಿದ ಅವರು ಪ್ರತಿಪಕ್ಷದ ಟೀಕೆಗಳೇನೇ ಇದ್ದರೂ ತಮ್ಮ ಸರ್ಕಾರ ಜನಪರ ಕೆಲಸ ಮಾಡುವುದನ್ನು ಮುಂದುವರಿಸುತ್ತದೆ ಎಂದು ಸ್ಪಷ್ಟಪಡಿಸಿದರು.ಬೇರೆ ರಾಜ್ಯಗಳಲ್ಲಿ ಹೀಗೆ ಮಾಡಲು ಕನಿಷ್ಟ 2-3 ವರ್ಷಗಳಷ್ಟು ಸಮಯ ತೆಗೆದುಕೊಳ್ಳುತ್ತಾರೆ, ಅದರೆ ನಿಮಗೆ ಹೇಗೆ ಇಷ್ಟು ಕಡಿಮೆ ಸಮಯದಲ್ಲಿ ಸಾಧ್ಯವಾಯಿತು ಕೇಂದ್ರದ ಅಧಿಕಾರಿಗಳು ತನ್ನನ್ನು ಕೇಳಿದ್ದಾರೆ, ನೆರೆರಾಜ್ಯಗಳೂ ಕೇಳಿವೆ. ಯಾವುದೇ ಭ್ರಷ್ಟಾಚಾರದ ಆರೋಪಗಳಿಲ್ಲದೆ 5 ಗ್ಯಾರಂಟಿಗಳ ಅನುಷ್ಠಾನಕ್ಕೆ ತಮ್ಮ ಸರ್ಕಾರ ಪ್ರಸಕ್ತ ವರ್ಷ 32 ಸಾವಿರ ಕೋಟಿ ರೂ. ಗಳನ್ನು ತೆಗೆದಿರಿಸಿದೆ, ಮುಂದಿನ ವರ್ಷ 58 ಸಾವಿರ ಕೋಟಿ ರೂ. ಖರ್ಚಾಗಲಿದೆ ಎಂದು ಸಚಿವರು ಹೇಳಿದರು.

    Share Information
    Advertisement
    Click to comment

    You must be logged in to post a comment Login

    Leave a Reply