Connect with us

    KARNATAKA

    ಕಾರಿಗೆ ಪಂಕ್ಚರ್ ಹಾಕಿದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ

    ಮೈಸೂರು, ಫೆಬ್ರವರಿ 26: ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಕಾರ್ಗೆ ಪಂಚರ್ ಹಾಕುತ್ತಿರುವ ವೀಡಿಯೋ ಸಖತ್ ವೈರಲ್ ಆಗಿದೆ.

    ಕುಟುಂಬದ ಜೊತೆ ರೋಹಿಣಿ ಸಿಂಧೂರಿ ಅವರು ಹೊರಗೆ ಹೋಗಿದ್ದರು. ಈ ಸಂದರ್ಭದಲ್ಲಿ ಕಾರಿನ ಟೈರ್ ಪಂಕ್ಚರ್ ಆಗಿದೆ. ಆಗ ಸ್ವತಃ ರೋಹಿಣಿಯವರೆ ಕಾರಿಗೆ ಪಂಚರ್ ಹಾಕಿದ್ದಾರೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕಾರಿನ ಟೈರ್ ಕಳಚುವ ವೇಳೆ ಸಾರ್ವಜನಿಕರು ಈ ವೀಡಿಯೋ ಮಾಡಿದ್ದಾರೆ. ತಾವು ರೋಹಿಣಿ ಸಿಂಧೂರಿ ಅಲ್ಲವಾ ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ನಕ್ಕು ಸುಮ್ಮನಾಗಿ ಮತ್ತೆ ತಮ್ಮ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply