Connect with us

LATEST NEWS

ಗಣಪತಿ ಆತ್ಮಹತ್ಯೆ ಪ್ರಕರಣ ಸಿಬಿಐ ಗೆ ಒಪ್ಪಿಸಿ ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ

ಹೊಸದಿಲ್ಲಿ, ಸೆಪ್ಟೆಂಬರ್ 06 : ಡಿವೈಎಸ್‌ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸುಪ್ರೀಂ ಕೋರ್ಟ್‌ ಸಿಬಿಐಗೆ ಒಪ್ಪಿಸಿದೆ. ಮೂರು ತಿಂಗಳೊಳಗೆ ತನಿಖೆ ನಡೆಸಿ ವರದಿ ಸಲ್ಲಿಸಬೇಕು ಎಂದು ಅದು ಹೇಳಿದೆ. ಗಣಪತಿ ಪ್ರಕರಣದಲ್ಲಿ ಪ್ರಕರಣದಲ್ಲಿ ಕೆಲವೊಂದು ಗಂಭೀರ ಅಂಶಗಳಿವೆ. ಹೀಗಾಗಿ ಸ್ವತಂತ್ರ ಸಂಸ್ಥೆಯಿಂದ ತನಿಖೆ ನಡೆಸುವುದು ಸೂಕ್ತ ಎಂದು ಸರ್ವೋಚ್ಚ ನ್ಯಾಯಾಲಯ ಪ್ರತಿಪಾದಿಸಿದೆ.

ಡಿವೈ ಎಸ್ ಪಿ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಕರ್ನಾಟಕ ಸರಕಾರ ಸಿಐಡಿ ಒಪ್ಪಿಸಿ ತನಿಖೆ ನಡೆಸಿತ್ತು. ಅಂದಿನ ಗೃಹ ಸಚಿವರು ಹಾಗೂ ಹಾಲಿ ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್‌ ಪ್ರಕರಣದಲ್ಲಿ ಆರೋಪಕ್ಕೆ ಗುರಿಯಾಗಿದ್ದರು.ಸಿಐಡಿಯ ತನಿಖೆಯಲ್ಲಿ ಜಾರ್ಜ್‌ ಕ್ಲಿನ್‌ಚಿಟ್‌ ಪಡೆದುಕೊಂಡಿದ್ದರು. ಆರೋಪ ಹೊತ್ತ ಐಪಿಎಸ್‌ ಅಧಿಕಾರಿಗಳಾದ ಪ್ರಣವ್‌ ಮೊಹಾಂತಿ, ಎ.ಎಂ. ಪ್ರಸಾದ್‌ ಅವರಿಗೂ ಕ್ಲೀನ್‌ಚಿಟ್‌ ನೀಡಿತ್ತು. ಅದನ್ನು ಪ್ರಶ್ನಿಸಿ ಗಣಪತಿ ತಂದೆ ಎಂ.ಕೆ. ಕುಶಾಲಪ್ಪ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾ| ಎ.ಕೆ. ಗೋಯಲ್‌ ಮತ್ತು ಯು.ಯು. ಲಲಿತ್‌ ಒಳಗೊಂಡ ಪೀಠ ಮಂಗಳವಾರ ಈ ಆದೇಶ ನೀಡಿದೆ. ಅದು ತನ್ನ ಅದೇಶದಲ್ಲಿ ಡಿವೈಎಸ್‌ಪಿ ಸಾವು ಆತ್ಮಹತ್ಯೆ ಅಥವಾ ಕೊಲೆಯೋ ಎಂಬ ಬಗ್ಗೆ ಸ್ಪಷ್ಟ ತೀರ್ಮಾನವಾಗಬೇಕಾಗಿದೆ.
ಅದನ್ನು ತಿಳಿಯಲು ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಬೇಕಿದೆ. ಪ್ರಕರಣದಲ್ಲಿ ಕೆಲವು ಗುರುತರ ಅಂಶ ಗಳಿವೆ. ಡಿವೈಎಸ್‌ಪಿ ಮಟ್ಟದ ಅಧಿಕಾರಿ ಸಾಯುವುದಕ್ಕೆ ಮೊದಲು ಅಂದಿನ ಗೃಹ ಸಚಿವರು, ಇಬ್ಬರು ಹಿರಿಯ ಐಪಿಎಸ್ ಪೊಲೀಸ್‌ ಅಧಿಕಾರಿಗಳ ವಿರುದ್ಧ ಪ್ರಬಲ ಆರೋಪ ಮಾಡಿದ್ದಾರೆ. ಹೀಗಾಗಿ ಪ್ರಕರಣದಲ್ಲಿ ಏನೋ ಇದೆ ಎನ್ನುವುದು ಮೇಲ್ನೋಟಕ್ಕೆ ಸ್ಪಷ್ಟವಾಗುತ್ತದೆ. ಮೂರು ತಿಂಗಳೊಳಗೆ ಕೇಂದ್ರ ತನಿಖಾ ಸಂಸ್ಥೆ ಸಿಬಿಐ ಈ ಬಗ್ಗೆ ತನಿಖೆ ನಡೆಸಿ, ಯಥಾಸ್ಥಿತಿ ವರದಿ ಸಲ್ಲಿಸಬೇಕು ಎಂದು ಸೂಚ್ಯವಾಗಿ ತಿಳಿಸಿದೆ.

Advertisement
Click to comment

You must be logged in to post a comment Login

Leave a Reply