LATEST NEWS
ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಬಂದ ಬಿಜೆಪಿ ಮುಖಂಡ ಪೊಲೀಸ್ ವಶ
ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಬಂದ ಬಿಜೆಪಿ ಮುಖಂಡ ಪೊಲೀಸ್ ವಶ
ಮಂಗಳೂರು ನವೆಂಬರ್ 10: ವಿರೋಧದ ನಡುವೆಯೂ ನಡೆಯುತ್ತಿರುವ ಟಿಪ್ಪು ಜಯಂತಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಮಂಗಳೂರಿನಲ್ಲಿ ಟಿಪ್ಪುಜಯಂತಿ ಆಚರಣೆ ಹಿನ್ನಲೆಯಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ನಡೆಸಿದ್ದಾರೆ. ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್ ನಲ್ಲಿ ಟಿಪ್ಪು ಜಯಂತಿ ಕಾರ್ಯಕ್ರಮ ನಡೆಯುವ ಹಿನ್ನೆಲೆ ಜಿಲ್ಲಾ ಪಂಚಾಯತ್ ಸುತ್ತಮುತ್ತ ಪೊಲೀಸರು ಬಿಗಿ ಸರ್ಪಗಾವಲು ಏರ್ಪಡಿಸಿದ್ದಾರೆ.
ಈ ನಡುವೆ ಟಿಪ್ಪುಜಯಂತಿ ಕಾರ್ಯಕ್ರಮಕ್ಕೆ ಆಗಮಿಸಿದ ಬಿಜೆಪಿ ಮುಖಂಡನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಿಲ್ಲಾಪಂಚಾಯತ್ ನಲ್ಲಿ ನಡೆಯುತ್ತಿರುವ ಟಿಪ್ಪುಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಸಂದರ್ಭ ಪೊಲೀಸರು ಬಿಜೆಪಿ ಮುಖಂಡ ಪ್ಲಾಂಕ್ಲಿನ್ ಮೊಂತೇರೊ ಅವರನ್ನು ವಶಕ್ಕೆ ಪಡೆದಿದ್ದಾರೆ. ನಂತರ ಬಿಜೆಪಿ ಮುಖಂಡ ಫ್ರಾಂಕ್ಲಿನ್ ಮೊಂತೇರೊ ಅವರನ್ನು ಉರ್ವಾ ಪೊಲೀಸ್ ವಶಕ್ಕೆ ನೀಡಲಾಯಿತು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೇ ಕಡೆ ಟಿಪ್ಪು ಜಯಂತಿ ಆಚರಣೆಗೆ ಅವಕಾಶ, ತಾಲೂಕು ಕೇಂದ್ರಗಳಲ್ಲಿ ಟಿಪ್ಪುಜಯಂತಿ ಆಚರಣೆಗೆ ಅವಕಾಶವಿಲ್ಲ ಎಂದು ದಕ್ಷಿಣಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
You must be logged in to post a comment Login