MANGALORE
ದೇಯಿ ಬೈದೇದಿ ವಿಗ್ರಹಕ್ಕೆ ಅವಮಾನ – ಕಠಿಣ ಕ್ರಮಕ್ಕೆ ಆಗ್ರಹ
ದೇಯಿ ಬೈದೇದಿ ವಿಗ್ರಹಕ್ಕೆ ಅವಮಾನ – ಕಠಿಣ ಕ್ರಮಕ್ಕೆ ಆಗ್ರಹ
ಮಂಗಳೂರು ಸೆಪ್ಟೆಂಬರ್ 20: ತುಳುನಾಡಿನ ವೀರ ಪುರುಷರಾದ ಕೋಟಿ ಚೆನ್ನಯ್ಯರ ತಾಯಿ ದೇಯಿ ಬೈದೇದಿ ವಿಗ್ರಹಕ್ಕೆ ಅವಮಾನ ಮಾಡಿದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಮಂಗಳೂರಿನಲ್ಲಿ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಪಂಪ್ ವೆಲ್ ವೃತ್ತದ ಬಳಿ ಸೇರಿದ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಪಂಜಿನ ಪ್ರತಿಭಟನೆ ನಡೆಸಿದರು.
ದೇಯಿ ಬೈದೇದಿ ವಿಗೃಹಕ್ಕೆ ಅವಮಾನ ಮಾಡಿ ಅಶ್ಲೀಲ ಫೋಟೋ ಕ್ಲಿಕ್ಕಿಸಿ ಸಾಮಾಜಿಕ ಜಾಲ ತಾಣದಲ್ಲಿ ಹರಿಬಿಟ್ಟ ಆರೋಪಿ ಅಬ್ದುಲ್ ಹನೀಫ್ ನನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
You must be logged in to post a comment Login