Connect with us

DAKSHINA KANNADA

ನಾಡೋಜ ಡಾ.ಸಾರಾ ಅಬೂಬಕ್ಕರ್ ಗೆ ಲಷ್ಕರಿ ಪ್ರಶಸ್ತಿ ಗರಿ

Share Information

ಪುತ್ತೂರು, ಆಗಸ್ಟ್ 30 : ಹಿರಿಯ ಸಾಹಿತಿ ನಾಡೋಜ ಡಾ. ಸಾರಾ ಅಬೂಬಕ್ಕರ್ ಪುತ್ತೂರಿನ ಲೋಕ ವಿಕಾಸ ಪ್ರತಿಷ್ಠಾನ ಹಾಗೂ ಲಷ್ಕರಿ ಕೇಶವ ಭಟ್ ಟ್ರಸ್ಟ್ ನ ಲಷ್ಕರಿ ಪ್ರಶಸ್ತಿಗೆ ಈ ಬಾರಿ ಆಯ್ಕೆಯಾಗಿದ್ದಾರೆ. ಸಾಹಿತ್ಯ ಕ್ಷೇತ್ರಕ್ಕೆ ಅದರಲ್ಲೂ ಮಹಿಳಾ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ ಸಾರಾ ಅಬೂಬಕ್ಕರ್ ಅವರನ್ನು 2017 ನೇ ಸಾಲಿನ ಲಷ್ಕರಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಸೆಪ್ಟೆಂಬರ್ 3 ರಂದು ಪುತ್ತೂರಿನ ಲಯನ್ಸ್ ಸೇವಾ ಸದನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಲಷ್ಕರಿ ಪ್ರಶಸ್ತಿ ಪ್ರದಾನವಾಗಲಿದೆ. ಈ ಸಂದರ್ಭದಲ್ಲಿ ಲೋಕ ವಿಕಾಸ್ ಪ್ರತಿಷ್ಠಾನದ ಅಧ್ಯಕ್ಷ ಎಸ್ ಜಿ ಕೃಷ್ಣರವರು ರಚಿಸಿದ ‘ಸಮಾನ ನಾಗರಿಕ ಸಂಹಿತೆ ಒಂದು ವಿವೇಚನೆ ‘ ಎಂಬ ಕೃತಿ ಅನಾವರಣಗೊಳ್ಳಲಿದೆ. ಕಾರ್ಯಕ್ರಮದ ಅಂಗವಾಗಿ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಅಶಕ್ತರಿಗೆ ವೈದ್ಯಕೀಯ ಚಿಕಿತ್ಸೆ ನೆರವು ಸೇರಿದಂತೆ ವಿದ್ಯಾಸಂಸ್ಥೆಗಳಿಗೆ ಪ್ರತಿಷ್ಠಾನದ ವತಿಯಿಂದ ಕೊಡುಗೆಗಳ ವಿತರಣೆ ಕೂಡ ನಡೆಯಲಿದೆ.


Share Information
Advertisement
Click to comment

You must be logged in to post a comment Login

Leave a Reply