Connect with us

    UDUPI

    ನಾರಾಯಣ ಗುರು ಜಯಂತಿ ಪೂರ್ವಬಾವಿ ಸಭೆ

    ಉಡುಪಿ,ಆಗಸ್ಟ್ 30: ಉಡುಪಿ ಜಿಲ್ಲಾ ಮಟ್ಟದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಸೆಪ್ಟಂಬರ್ 6 ರಂದು ಬನ್ನಂಜೆಯ ನಾರಾಯಣ ಗುರು ಸಭಾ ಭವನದಲ್ಲಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಅನುರಾಧ ತಿಳಿಸಿದ್ದಾರೆ.
    ಅವರು ಬುಧವಾರ ನಾರಾಯಣ ಗುರು ಜಯಂತಿ ಆಚರಣೆ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಾರಾಯಣ ಗುರು ಜಯಂತಿ ಅಂಗವಾಗಿ ಜಿಲ್ಲೆಯ ಎಲ್ಲಾ ಪ್ರೌಢಶಾಲಾ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ, ನಾರಾಯಣಗುರುಗಳ ತತ್ವ ಮತ್ತು ವಿಚಾರ ಧಾರೆ ಕುರಿತು ಭಾಷಣ ಸ್ಪರ್ದೆ ಏರ್ಪಡಿಸುವಂತೆ ಹಾಗೂ ಜಿಲ್ಲೆಯಲ್ಲಿ ಕ್ರೀಡೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಕುರಿತಂತೆ ಜಿಲ್ಲಾ ಪಂಚಾಯತ್ ಸದಸ್ಯ ಜನಾರ್ಧನ ತೋನ್ಸೆ ತಿಳಿಸಿದರು. ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆ ಹಾಗೂ ಪಿಯು ಇಲಾಖೆಯ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸೂಚಿಸಿದರು.
    ನಾರಾಯಣ ಗುರು ಗಳ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಹಾಗೂ ಸುಗಮ ಸಂಗೀತ ಕಾರ್ಯಕ್ರಮ ಆಯೋಜಿಸುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ತಿಳಿಸಿದರು.
    ಸಭೆಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಮಹಾದೇವಯ್ಯ, ತಾಂತ್ರಿಕ ಮೇಲ್ವಿಚಾರಕಿ ಪೂರ್ಣಿಮಾ, ಬಿಲ್ಲವ ಸಂಘದ ಅಧ್ಯಕ್ಷ ಬಿಬಿ ಪೂಜಾರಿ, ಕಾರ್ಯದರ್ಶಿ ಮಾಧವ ಬನ್ನಂಜೆ, ಬಿಲ್ಲವ ಒಕ್ಕೂಟದ ಕಾರ್ಯದರ್ಶಿ ಶಿವಾಜಿ ಸುವರ್ಣ, ಮಾನವೋತ್ಥಾನ ಸೇವಾ ಸಮಿತಿ ಉಡುಪಿಯ ಜಿಲ್ಲಾ ಕಾರ್ಯದರ್ಶಿ ಸುಂದರ್ ಜತ್ತನ್, ಸುಧಾಕರ ಪೂಜಾರಿ, ದೇವದಾಸ ಆರ್ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply