Connect with us

DAKSHINA KANNADA

ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಮಹೇಶ್ ಪುಚ್ಚಂಪಾಡಿ ಆಯ್ಕೆ

ಪುತ್ತೂರು,ಅಗಸ್ಟ್ 30: ಪುತ್ತೂರು ಪತ್ರಕರ್ತರ ಸಂಘದ ಮಹಾಸಭೆಯು ಇಂದು ಪುತ್ತೂರು ಪತ್ರಕರ್ತ ಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಸಂತೋಷ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 2016-17 ರ ಸಾಲಿನ ಲೆಕ್ಕಪತ್ರ ಹಾಗೂ ವರದಿಯನ್ನು ಮಂಡಿಸಲಾಯಿತು. ಬಳಿಕ ನಡೆದ ಸಂಘದ ಪದಾಧಿಕಾರಿಗಳ ಚುನಾವಣೆಗೆ ಎಲ್ಲಾ ಪದಾಧಿಕಾರಿಗಳ ಆಯ್ಕೆಯು ಅವಿರೋಧವಾಗಿ ನಡೆಯಿತು. ಸಂಘದ ನೂತನ ಅಧ್ಯಕ್ಷರಾಗಿ ಹೊಸದಿಗಂತ ಪತ್ರಿಕೆಯ ಪುತ್ತೂರು ವಿಭಾಗದ ಮುಖ್ಯಸ್ಥರಾದ ಮಹೇಶ್ ಪುಚ್ಚಪ್ಪಾಡಿ, ಕಾರ್ಯದರ್ಶಿಯಾಗಿ ಉದಯವಾಣಿ ಪತ್ರಿಕೆಯ ಪುತ್ತೂರು ವಿಭಾಗದ ವರದಿಗಾರ ಕಿರಣ್ ಪ್ರಸಾದ್ ಕುಂಡಡ್ಕ, ಉಪಾಧ್ಯಕ್ಷರಾಗಿ ವಿಜಯಕರ್ನಾಟಕ ಪತ್ರಿಕೆಯ ಸುಧಾಕರ್ ತಿಂಗಳಾಡಿ ಹಾಗೂ ಮುಕ್ತ ವಾಹಿನಿಯ ಅನೀಶ್ ಕುಮಾರ್ ಮರೀಲ್, ಜೊತೆ ಕಾರ್ಯದರ್ಶಿಯಾಗಿ ವಿಜಯವಾಣಿ ಪತ್ರಿಕೆಯ ಶ್ರವಣ್ ಕುಮಾರ್ ನಾಳ ಹಾಗೂ ಕೋಶಾಧಿಕಾರಿಯಾಗಿ ಹರೀಶ್ ಆಯ್ಕೆಯಾಗಿದ್ದಾರೆ.

Share Information
Advertisement
Click to comment

You must be logged in to post a comment Login

Leave a Reply