Connect with us

    LATEST NEWS

    ಪುತ್ತೂರಿನ ಮಿನಿ ವಿಧಾನ ಸೌಧದ ಎದುರು ಶವ ಇಟ್ಟು ಪ್ರತಿಭಟನೆ

    ಪುತ್ತೂರಿನ ಮಿನಿ ವಿಧಾನ ಸೌಧದ ಎದುರು ಶವ ಇಟ್ಟು ಪ್ರತಿಭಟನೆ

    ಪುತ್ತೂರು ನವೆಂಬರ್ 17: ವೈದ್ಯರ ಮುಷ್ಕರದ ಹಿನ್ನಲೆಯಲ್ಲಿ ಸೂಕ್ತ ಚಿಕಿತ್ಸೆ ಸಿಗದೆ ವಿದ್ಯಾರ್ಥಿನಿ ಪೂಜಾ ಪುತ್ತೂರಿನ ಕಬಕದಲ್ಲಿ ಸಾವನಪ್ಪಿದ್ದರು. ಸರಕಾರದ ನಿರ್ಲಕ್ಷ್ಯದಿಂದಲೇ ಈ ಸಾವು ಸಂಭವಿಸಿದೆ ಎಂದು ಕುಟುಂಬ ಸದಸ್ಯರು ಆರೋಪ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿನಿ ಕುಟುಂಬ ಹಾಗೂ ಗ್ರಾಮಸ್ಥರಿಂದ ಪುತ್ತೂರಿನ ಮಿನಿ ವಿಧಾನಸೌಧದ ಮುಂದೆ ವಿದ್ಯಾರ್ಥಿನಿ ಶವ ಮುಂದಿಟ್ಟು ಪ್ರತಿಭಟನೆ ನಡೆಸಿದರು.

    ಸರಕಾರದ ನಿರ್ಲಕ್ಷ್ಯದಿಂದಲೇ ಈ ಸಾವು ಸಂಭವಿಸಿದೆ ಎಂದು ಆರೋಪ ಮಾಡಿದ ಪೂಜಾ ಕುಟುಂಬದವರು ಸರಕಾರ ಹಾಗೂ ವೈದ್ಯರ ನಡುವಿನ ಗುದ್ದಾಟ ಪೂಜಾಳ ಸಾವಿಗೆ ಕಾರಣವಾಗಿದೆ ಎಂದು ಆರೋಪಿಸಿದರು. ಸರಕಾರವೇ ಈ ಕುಟುಂಬಕ್ಕೆ ಪರಿಹಾರ ನೀಡಬೇಕೆಂಬ ಒತ್ತಾಯವು ಪ್ರತಿಭಟನಾ ನಿರತ ಗ್ರಾಮಸ್ಥರಿಂದ ಕೇಳಿ ಬಂದಿದೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ತಹಶಿಲ್ದಾರರ ಮೂಲಕ ಸರಕಾರಕ್ಕೆ ಮೃತ ವಿಧ್ಯಾರ್ಥಿನಿ ಪೂಜಾ ಮನೆಯವರು ಮನವಿ ಸಲ್ಲಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply