ಮಂಗಳೂರು, ಸೆಪ್ಟೆಂಬರ್ 05 : ಬಿಜೆಪಿ ಸೆಪ್ಟಂಬರ್ 7 ರಂದು ನಡೆಯುವ ಮಂಗಳೂರು ಚಲೋ ಬೈಕ್ ರಾಲಿಯನ್ನು ಸವಾಲಾಗಿ ತೆಗೆದುಕೊಂಡಿದೆ.
ಪಕ್ಷದ ಕಾರ್ಯಕರ್ತರು ಬಸ್, ರೈಲು ಹಾಗೂ ವಿಮಾನಗಳಲ್ಲಿ ಜಿಲ್ಲೆಯನ್ನು ತಲುಪಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಹೇಳಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಗೋಷ್ಟಿಯನ್ನು ಉದ್ಧೇಶಿಸಿ ಮಾತನಾಡಿದ ಅವರು ಬಿಜೆಪಿ ಯುವ ಮೋರ್ಚಾ ಹಮ್ಮಿಕೊಂಡಿರುವ ಬೈಕ್ ಚಲೋ ಕಾರ್ಯಕ್ರಮ ಜನರಿಗೆ ಮಾನಸಿಕ ಸ್ಥೈರ್ಯ ತುಂಬುವ ಕಾರ್ಯಕ್ರಮವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ಬಿಜೆಪಿ ಮುಖಂಡರು ಭಾಗವಹಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು. ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರಕಾರ ಬಿಜೆಪಿ ನಾಯಕರನ್ನು ಬಂಧಿಸಿ ಗೂಂಡಾ ವರ್ತನೆಯನ್ನು ತೋರುತ್ತಿದೆ. ಸಿದ್ಧರಾಮಯ್ಯ ಸಿದ್ಧ ರಾವಣ ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ ಎಂದರು. ರಾಜ್ಯದಲ್ಲಿ ಸಿದ್ಧರಾಮಯ್ಯ ಅಘೋಷಿತ ತುರ್ತು ಪರಿಸ್ಥಿತಿಯನ್ನು ನಿರ್ಮಿಸಿದೆ. ಯಾವುದೇ ಕಾರಣಕ್ಕೂ ಮಂಗಳೂರಿನಲ್ಲಿ ಬೈಕ್ ರಾಲಿ ನಡೆಸಿಯೇ ಸಿದ್ಧ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು. ರಾಲಿಗೆ ಕಾರ್ಯಕರ್ತರನ್ನು ಒಟ್ಟುಗೂಡಿಸಲು ಬಿಜೆಪಿ ನಾಯಕರು ಸಾಮಾಜಿಕ ಜಾಲತಾಣಗಳಲ್ಲೂ ಮನವಿ ಮಾಡುತ್ತಿದ್ದು, ಈ ವಿಡಿಯೋಗಳು ವೈರಲ್ ಆಗಿವೆ..
ವಿಡಿಯೋ..