LATEST NEWS
ಮಂಗಳೂರಿನಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ಆರಂಭ
ಮಂಗಳೂರಿನಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ಆರಂಭ
ಮಂಗಳೂರು ನವೆಂಬರ್ 9: ಮಂಗಳೂರಿನಲ್ಲಿ ಬಿಜೆಪಿಯ ಕೋರ್ ಕಮಿಟಿ ಸಭೆ ಆರಂಭವಾಗಿದೆ. ಮಂಗಳೂರಿನ ಓಷಿಯನ್ ಪರ್ಲ್ ಹೋಟೆಲ್ ನಲ್ಲಿ ಸಭೆ ನಡೆಯುತ್ತಿದೆ. 15 ಮಂದಿ ಕೋರ್ ಕಮಿಟಿ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದಾರೆ. ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ನೇತೃತ್ವದಲ್ಲಿ ಈ ಸಭೆ ನಡೆಯುತ್ತಿದೆ.
ರಾಜ್ಯದಲ್ಲಿ ನಡೆಯುತ್ತಿರುವ ಪ್ರಚಲಿತ ವಿಧ್ಯಮಾನಗಳು, ಪರಿವರ್ತನಾ ರಾಲಿಯ ಯಶಸ್ಸು, ಟಿಪ್ಪು ಜಯಂತಿ, ಮುಂಬರುವ ಚುನಾವಣೆ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ. ಸಭೆಯಲ್ಲಿ ಕೇಂದ್ರ ಮಂತ್ರಿಗಳಾದ ಪಿಯೂಷ್ ಗೋಯೆಲ್, ಸದಾನಂದ ಗೌಡ, ಅನಂತ ಕುಮಾರ್ ಭಾಗವಹಿಸಿದ್ದು, ರಾಜ್ಯದ ಮುಖಂಡರಾದ ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಈಶ್ವರಪ್ಪ, ಸಿಎಂ ಉದಾಸಿ , ಅರವಿಂದ ಲಿಂಬಾವಳಿ, ಸಿಟಿ ರವಿ, ಮುರಳೀಧರ್ ರಾವ್, ಆರ್. ಅಶೋಕ್, ನಳಿನ್ ಕುಮಾರ್ ಕಟೀಲ್,ಹಾಗೂ ಆರ್ ಎಸ್ ಎಸ್ ಮುಖಂಡರಾದ ಸಂತೋಷ್,ಅರುಣ್ ಕುಮಾರ್ ಭಾಗವಹಿಸಿದ್ದಾರೆ.
You must be logged in to post a comment Login