DAKSHINA KANNADA
ಮೋಹನ್ ಆಳ್ವಾ ಪರ ಕಾರ್ಯಕ್ರಮ ತಡೆಗೆ ಯತ್ನ, ಅಖಿಲ ಭಾರತ ಹಿಂದೂ ಮಹಾಸಭಾದ ಕಾರ್ಯಕರ್ತರ ಬಂಧನ.
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಮಂಗಳೂರು,ಅಗಸ್ಟ್ 10:ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಕಾವ್ಯಾ ಅನುಮಾನಾಸ್ಪದ ಸಾವಿನ ಬಳಿಕ ಇದೀಗ ಸಂಸ್ಥೆಯ ಅಧ್ಯಕ್ಷರಾದ ಮೋಹನ್ ಆಳ್ವ ಪರ ಹಾಗೂ ವಿರೋಧ ಅಭಿಪ್ರಾಯಗಳು ಘರ್ಷಣೆಯ ಹಂತಕ್ಕೆ ತಲುಪಿದೆ. ಕಲೆ, ಸಾಹಿತ್ಯ , ಸಾಂಸ್ಕೃತಿಕ ಕ್ರೀಡಾ ಸಾಧಕ-ಸಂಘಟಕರ ಕರೆ ಎನ್ನುವ ವೇದಿಕೆಯು ಇಂದು ಮಂಗಳೂರಿನ ಪುರಭವನದಲ್ಲಿ ಆಯೋಜಿಸಿದ್ದ ನಾಡಸಿರಿಯ ದ್ವನಿ ಆಳ್ವರೊಂದಿಗೆ ನಾವು ಕಾರ್ಯಕ್ರಮಕ್ಕೆ ಅಡ್ಡಿಪಡಿಸುವ ಪ್ರಯತ್ನ ನಡೆದಿದೆ.
ಅಖಿಲ ಭಾರತ ಹಿಂದೂ ಮಹಾಸಭಾಕ್ಕೆ ಸೇರಿದ ಕಾರ್ಯಕರ್ತರು ಈ ಕಾರ್ಯಕ್ರಮವನ್ನು ನಡೆಸಬಾರದೆಂದು ಎಚ್ಚರಿಕೆ ನೀಡಿದ್ದರಲ್ಲದೆ, ಪುರಭವನಕ್ಕೆ ಮುತ್ತಿಗೆ ಹಾಕಿ ಕಾರ್ಯಕ್ರಮವನ್ನು ತಡೆಯುವ ಯತ್ನಕ್ಕೂ ಕೈ ಹಾಕಿದ್ದಾರೆ. ಈ ಸಂಬಂಧ ಪೋಲೀಸರು ಮೂವರು ಅಖಿಲ ಭಾರತ ಹಿಂದೂ ಮಹಾಸಭಾಕ್ಕೆ ಸೇರಿದ ಕಾರ್ಯಕರ್ತರನ್ನು ಬಂಧಿಸಿದ್ದಾರೆ.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
. ಕಾರ್ಯಕ್ರಮದ ಹಿನ್ನಲೆಯಲ್ಲಿ ಪುರಸಭೆಯ ಸುತ್ತ ಬಿಗಿ ಪೋಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೋಲೀಸರು ಮುಂಜಾಗೃತಾ ಕ್ರಮವನ್ನು ವಹಿಸಿದ್ದಾರೆ.
You must be logged in to post a comment Login