Connect with us

    BANTWAL

    ವಿಟ್ಲದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಪಟ್ಟು – ಪೊಲೀಸ್ ಲಾಠಿ ಚಾರ್ಜ್

    ವಿಟ್ಲದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಪಟ್ಟು – ಪೊಲೀಸ್ ಲಾಠಿ ಚಾರ್ಜ್

    ಬಂಟ್ವಾಳ ನವೆಂಬರ್ 10: ಜಿಲ್ಲಾಧಿಕಾರಿ ಆದೇಶದ ಹೊರತು ವಿಟ್ಲದಲ್ಲಿ ಟಿಪ್ಪುಜಯಂತಿ ಆಚರಣೆಗೆ ಮುಂದಾದ ಘಟನೆ ನಡೆದಿದೆ, ವಿಟ್ಲ ಸಮೀಪದ ಒಕ್ಕೆತ್ತೂರಿನಲ್ಲಿ ಎಂಬಲ್ಲಿ ಈ ಘಟನೆ ನಡೆದಿದೆ. ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ಈ ಹಿನ್ನಲೆಯಲ್ಲಿ ಬಲವಂತವಾಗಿ ಟಿಪ್ಪುಜಯಂತಿ ಆಚರಣೆಗೆ ಹೊರಟ ಸುಲೈ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

    ಸುಲೈ ಬಂಧನ ಖಂಡಿಸಿ ಉದ್ರಿಕ್ತರ ಗುಂಪು ವಿಟ್ಲ ಠಾಣೆಗೆ ಮುತ್ತಿಗೆ ಹಾಕಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಪೊಲೀಸರು ಲಾಠಿ ಚಾರ್ಜ್ ನಡೆಸಿ ಗುಂಪನ್ನು ಚದುರಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
    ದಕ್ಷಿಣಕನ್ನಡ ಜಿಲ್ಲಾಧಿಕಾರಿ ಜಿಲ್ಲಾ ಕೇಂದ್ರದಲ್ಲಿ ಮಾತ್ರ ಟಿಪ್ಪು ಜಯಂತಿಗೆ ಆವಕಾಶ ನೀಡಿದ್ದರು. ತಾಲೂಕು ಕೇಂದ್ರಗಳಲ್ಲಿ ಟಿಪ್ಪುಜಯಂತಿ ಆಚರಣೆಗೆ ಅವಕಾಶ ಇಲ್ಲ ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply