DAKSHINA KANNADA
ಉಪವಾಸ ನಿರತ ಸುದತ್ತ ಜೈನ್ ಅಸ್ವಸ್ಥ – ಆಸ್ಪತ್ರೆಗೆ ದಾಖಲು
ಉಪವಾಸ ನಿರತ ಸುದತ್ತ ಜೈನ್ ಅಸ್ವಸ್ಥ – ಆಸ್ಪತ್ರೆಗೆ ದಾಖಲು
ಮೂಡಬಿದಿರೆ ಅಕ್ಟೋಬರ್ 25: ಅರಣ್ಯಇಲಾಖೆಯ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಆಗ್ರಹಿಸಿ 14 ದಿನಗಳಿಂದ ಧರಣಿ ಹಾಗೂ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸುದತ್ತ ಜೈನ್ ಅಸ್ವಸ್ಥರಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅರಣ್ಯ ಇಲಾಖೆಯ ಅಧಿಕಾರಿಗಳು ಹಲ್ಲೆ ನಡೆಸುವುದನ್ನು ನಿಲ್ಲಿಸಬೇಕು ಹಾಗೂ ಸುದರ್ಶನ ಶೇರಿಗಾರ್ ಅವರ ಮೇಲೆ ಹಲ್ಲೆ ನಡೆಸಿದ ಪ್ರಶಾಂತ್ ಕುಮಾರ್ ಪೈ ವಿರುದ್ದ ಸೂಕ್ತ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತರ ಸುದತ್ತ ಜೈನ್ ಕಳೆದ 14 ದಿಗಳಿಂದ ಮೂಡಬಿದಿರೆಯ ನಾಡಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸುತ್ತಿದ್ದರು.
ಕಳೆದ 7 ದಿನಗಳಿಂದ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು. ಉಪವಾಸ ನಿರತ ಸುದತ್ತ್ ಜೈನ್ ಅವರ ಆರೋಗ್ಯದಲ್ಲಿ ಸಮಸ್ಯೆ ಕಂಡು ಬಂದಿದ್ದರಿಂದ ಅವರನ್ನು ಇಂದು ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರ ಸೂಚನೆಯ ಮೇರೆಗೆ ಸುದತ್ತ ಜೈನ್ ಅವರಿಗೆ ಗ್ಲುಕೋಸ್ ನ್ನು ನೀಡಲಾಗಿದ್ದು , ಆಸ್ಪತ್ರೆಯಲ್ಲಿಯೂ ಉಪವಾಸ ಸತ್ಯಾಗ್ರಹ ಮುಂದುವರೆಸಿದ್ದಾರೆ.
You must be logged in to post a comment Login