Connect with us

    DAKSHINA KANNADA

    ಉಪ್ಪಿನಂಗಡಿಯಲ್ಲಿ ಹೆದ್ದಾರಿಯಲ್ಲಿ ಪಲ್ಟಿಯಾದ ಲಾರಿ : ಸಂಚಾರ ಸ್ಥಗಿತ

    ಉಪ್ಪಿನಂಗಡಿಯಲ್ಲಿ ಹೆದ್ದಾರಿಯಲ್ಲಿ ಪಲ್ಟಿಯಾದ ಲಾರಿ : ಸಂಚಾರ ಸ್ಥಗಿತ

    ಪುತ್ತೂರು, ಜೂನ್ 15 : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ನೀರಕಟ್ಟೆ ಬಳಿ ಲಾರಿಯೊಂದು ಹೆದ್ದಾರಿಯಲ್ಲೇ ಮಗುಚಿ ಬಿದ್ದಿದೆ.

    ಇದರಿಂದ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ನೀರಕಟ್ಟೆ ಪ್ರದೇಶ ಎಂಬಲ್ಲಿ ಈ ದುರ್ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

    ದುರ್ಘಟನೆಯಲ್ಲಿ ಲಾರಿ ಚಾಲಕನಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

    ಉಪ್ಪಿನಂಗಡಿ ಪೊಲಿಸರು ಸ್ಥಳಕ್ಕೆ ಧಾವಿಸಿ ಸುಗಮ ಸಂಚಾರಕ್ಕೆ ಬದಲಿ ಮಾರ್ಗ ವ್ಯವಸ್ಥೆ ಮಾಡಿಕೊಟ್ಟಿದ್ದರು. ಉಪ್ಪಿನಂಗಡಿ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲು ಮಾಡಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply