Connect with us

DAKSHINA KANNADA

ಪಶ್ಚಿಮ ವಲಯ ಐಜಿಪಿಯಾಗಿದ್ದ ಹಿರಿಯ ಐಪಿಎಸ್ ಅಧಿಕಾರಿ ಹರಿಶೇಖರನ್ ವರ್ಗಾವಣೆ

ಮಂಗಳೂರು ಅಗಸ್ಟ್ 7 : ಪಶ್ಚಿಮ ವಲಯ ಐಜಿಪಿಯಾಗಿದ್ದ ಹಿರಿಯ ಐಪಿಎಸ್ ಅಧಿಕಾರಿ ಹರಿಶೇಖರನ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಹರಿಶೇಖರನ್ ಅವರ ಸ್ಥಾನಕ್ಕೆ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆರು ತಿಂಗಳ ಹಿಂದೆಯಷ್ಟೇ ಪಶ್ಚಿಮ ವಲಯ ಐಜಿಪಿಯಾಗಿ ನೇಮಕವಾಗಿದ್ದ ಹರಿಶೇಖರನ್ ಅವರನ್ನು ವರ್ಗಾವಣೆ ಮಾಡಿ ಹೊರಡಿಸಿದ ರಾಜ್ಯ ಸರ್ಕಾರದ ಆದೇಶ ಕುತೂಹಲ ಮೂಡಿಸಿದೆ.

ಕಲ್ಲಡ್ಕ ಗುಂಪು ಘರ್ಷಣೆ ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣದ ನಂತರ ನಡೆದ ಬೆಳವಣಿಗೆಗಳನ್ನು ಸರಿಯಾಗಿ ನಿಭಾಯಿಸದ ಹಿನ್ನೆಲೆಯಲ್ಲಿ ಹರಿಶೇಖರನ್ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿಯಾಗಿದ್ದ ಭೂಷಣ್ ಗುಲಾಬ್ ರಾವ್ ಬೋರಸೆ ಅವರನ್ನು ರಾಜ್ಯ ಸರ್ಕಾರ ಏಕಾಏಕಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *