Connect with us

DAKSHINA KANNADA

ಕರಾವಳಿಯಲ್ಲಿ ಭಾರಿ ಗಾಳಿಮಳೆ; ಮೂವರಿಗೆ ಗಾಯ, ಅಪಾರ ನಷ್ಟ.ಸಂಕಷ್ಟದಲ್ಲಿ ಸಮುದ್ರತೀರದ ನಿವಾಸಿಗಳು

ಮಂಗಳೂರು/ಉಡುಪಿ ,ಜುಲೈ,19: ಕರಾವಳಿಯಲ್ಲಿ ಕಳೆದ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಜನ ಜೀವನದ ಮೇಲೂ ಪರಿಣಾಮ ಬೀರಿದೆ. ಭಾರಿ ಗಾಳಿಯೊಂದಿಗೆ ಸತತವಾಗಿ ಮಳೆ ಸುರಿಯುತ್ತಿದೆ.

ಉಡುಪಿ ಜಿಲ್ಲೆಯಲ್ಲಿ ಕೂಡ ಭಾರಿ ಗಾಳಿ ಮಳೆಯಾಗುತ್ತಿದ್ದು, ಪಡುಬಿದ್ರಿಯ ತೆಂಕ ಎರ್ಮಾಳ್ ನಲ್ಲಿ ಜಿಕ್ಕಿ ಪೂಜಾರ್ತಿಯವರ ಮನೆಯ ಮೇಲೆ ಮರವೊಂದು ಉರುಳಿ ಬಿದ್ದ ಪರಿಣಾಮ ಮೂವರಿಗೆ ಗಾಯಗಳಾಗಿದ್ದು ಸುಮಾರು 3 ಲಕ್ಷ ರೂಪಾಯಿಗಳ ನಷ್ಟ ಸಂಭವಿಸಿದೆ. ಘಟನೆಯ ಸಂದರ್ಭದಲ್ಲಿ ಮನೆಯಲ್ಲಿ ಮಲಗಿದ್ದ ಲತಾ ಪೂಜಾರ್ತಿ, ಮಕ್ಕಳಾದ ಸಿಂಚನಾಮತ್ತು ನಿಶಾಂತ್ ಅವರಿಗೂ ತೀವ್ರವಾಗಿ ಗಾಯಗೊಂಡಿದ್ದಾರೆ. ಹಿರಿಯ ಅಧಿಕಾರಿಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಸಾಂತ್ವನದೊಂದಿಗೆ ಪರಿಹಾರದ ಭರವಸೆಯನ್ನು ನೀಡಿದ್ದಾರೆ.


ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಮಳೆಯ ಆರ್ಭಟ ಹೆಚ್ಚಿದೆ, ಉಳ್ಳಾಲದ ಸಮುದ್ರ ತೀರದ ಪ್ರದೇಶಗಳಲ್ಲಿ ಸಮುದ್ರ ಕೊರೆತ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಅನೇಕ ಮನೆಗಳು, ಒಂದು ಪಾರ್ಥನ ಮಂದಿರಕ್ಕೂ ಭಾರಿ ಪ್ರಮಾಣದಲ್ಲಿ ಹಾನಿಯಾಗಿದೆ. ಆನೇಕ ತೆಂಗಿನ ಮರಗಳು ಸಮುದ್ರಪಾಲಾಗಿವೆ.ಇಲ್ಲಿನ ಕೈಕೊ, ಉಚ್ಚಿಲ, ಸೋಮೇಶ್ವರ, ಹಿಲರಿ ನಗರ ರ ತೀರಗಳಲ್ಲಿ ಭಾರಿ ಪ್ರಮಾಣದಲ್ಲಿ ಹಾನಿ ಸಂಭವಿಸಿದ್ದು, ಕಂದಾತ ಅಧಿಕಾರಿಗಳು, ಜನ ಪ್ರತಿನಿದಿಗಳು ಸ್ತಲಕ್ಕೆ ಭೇಟಿ ನೀಡಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *