LATEST NEWS
ಕರಾವಳಿ ಉತ್ಸವ ಉದ್ಘಾಟನೆಗೆ ಪ್ರಕಾಶ್ ರೈ – ಸೋಶಿಯಲ್ ಮಿಡಿಯಾದಲ್ಲಿ ಭಾರಿ ವಿರೋಧ
ಕರಾವಳಿ ಉತ್ಸವ ಉದ್ಘಾಟನೆಗೆ ಪ್ರಕಾಶ್ ರೈ – ಸೋಶಿಯಲ್ ಮಿಡಿಯಾದಲ್ಲಿ ಭಾರಿ ವಿರೋಧ
ಮಂಗಳೂರು ಡಿಸೆಂಬರ್ 22 : ಕರಾವಳಿ ಉತ್ಸವಕ್ಕೆ ಮಂಗಳೂರಿನಲ್ಲಿ ಇಂದು ಚಾಲನೆ ಸಿಗಲಿದೆ. ಖ್ಯಾತ ಚಿತ್ರನಟ ಪ್ರಕಾಶ್ ರೈ ಕರಾವಳಿ ಉತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಆದರೆ ಈ ನಡುವೆ ಕರಾವಳಿ ಉತ್ಸವ ಚಾಲನೆಗೆ ಪ್ರಕಾಶ್ ರೈ ಬರುತ್ತಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವಿರೋಧ ವ್ಯಕ್ತವಾಗಿದೆ.
ಕೇರಳದಲ್ಲಿ ಉಸಿರಾಡಲು ಉತ್ತಮಗಾಳಿ ಇರುವಾಗ ಕನ್ನಡ ನಾಡಿಗೆ ಯಾಕೆ ಬರ್ತಿಯಾ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಲಾಗಿದೆ. ಪ್ರಕಾಶ್ ರೈ ಅವರ ಭಾವಚಿತ್ರಕ್ಕೆ ಚಪ್ಪಲಿಯನ್ನು ಎಡಿಟ್ ಮಾಡಿ ಗೊ ಬ್ಯಾಕ್ ಪ್ರಕಾಶ್ ರೈ ಎಂದು ಬರೆದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗಿದೆ. ಇದು ಬಾರಿ ವಿವಾದಕ್ಕೆ ಕಾರಣವಾಗಿದೆ.
ನೆಟ್ಟಿಗರು ಜಾಲತಾಣದಲ್ಲಿ ಪ್ರಕಾಶ್ ರೈ ವಿರುದ್ದ ಆಕ್ರೋಶ ಹೊರಹಾಕಿದ್ದು , ಪ್ರಕಾಶ್ ರೈ ಗಂಜಿ ಗಿರಾಕಿ ಎಂದು ಸಂಬೋಧಿಸಲಾಗಿದೆ. ಕಾಂಗ್ರೇಸ್ ಪಕ್ಷದ ಬಕೆಟ್ ಗಿರಾಕಿ ಎಂದು ಪ್ರಕಾಶ್ ರೈ ವಿರುದ್ದ ಜಾಲತಾಣದಲ್ಲಿ ಬರೆಯಲಾಗಿದ್ದು ಮುಂಬರುವ ಚುನಾವಣೆಯಲ್ಲಿ ಪ್ರಕಾಶ್ ರೈ ಟಿಕೆಟ್ ಆಕಾಂಕ್ಷಿ ಎಂದು ಜಾಲತಾಣದಲ್ಲಿ ಲೇವಡಿ ಮಾಡಲಾಗಿದೆ.
You must be logged in to post a comment Login