Connect with us

LATEST NEWS

ಕಾನೂನು ಮೀರಿ ವರ್ತಿಸಿದ ಪೊಲೀಸರು – ಜಗದೀಶ್ ಕಾರಂತ್ ಮಧ್ಯಂತರ ಜಾಮೀನು

ಕಾನೂನು ಮೀರಿ ವರ್ತಿಸಿದ ಪೊಲೀಸರು – ಜಗದೀಶ್ ಕಾರಂತ್ ಮಧ್ಯಂತರ ಜಾಮೀನು

ಪುತ್ತೂರು. ಸೆಪ್ಟೆಂಬರ್ 30 ಪುತ್ತೂರು ಸಂಪ್ಯ ಎಸ್.ಐ ವಿರುದ್ಧ ಅವಹೇಳನಕಾರಿ ಹೇಳಿಕೆ ಹಾಗೂ ಇತರ ಕಾಯ್ದೆಯಡಿ ಬಂಧಿಸಲ್ಪಟ್ಟಿದ್ದ ಹಿಂದೂ ಜಾಗರಣ ವೇದಿಕೆಯ ಮುಖಂಡ ಜಗದೀಶ್ ಕಾರಂತರಿಗೆ ಪುತ್ತೂರು ನ್ಯಾಯಾಲಯವು ಮದ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ.

ಸೆಪ್ಟೆಂಬರ್15 ರಂದು ಪುತ್ತೂರಿನಲ್ಲಿ ನಡೆದಿದ್ದ ಪ್ರತಿಭಟನಾ ಸಭೆಯಲ್ಲಿ ಜಗದೀಶ್ ಕಾರಂತ್ ಸಂಪ್ಯ ಠಾಣೆಯ ಎಸ್.ಐ ವಿರುದ್ಧ ಅವಹೇಳನಕಾರಿ ಮಾತನಾಡಿದ್ದರು.

ಈ ಸಂಬಂಧ ಪುತ್ತೂರು ನಗರ ಪೋಲೀಸರು ಕಾರಂತ್ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದರು. ಈ ಹಿನ್ನಲೆಯಲ್ಲಿ ಇಂದು ಕಾರಂತರನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದ ದಕ್ಷಿಣಕನ್ನಡ ಜಿಲ್ಲಾ ಅಪರಾಧ ಪತ್ತೆ ದಳದ ಪೋಲೀಸರು ಅವರನ್ನು ಪುತ್ತೂರು ನ್ಯಾಯಾಧೀಶರ ಮನೆಯಲ್ಲಿ ಹಾಜರುಪಡಿಸಿದರು.

ಸೆಕ್ಷನ್ 41 ರ ಅಡಿ ಆರೋಪಿಗೆ ನೋಟೀಸ್ ಜಾರಿ ಮಾಡುವ ಮೊದಲು ಬಂಧನ ನಡೆಸುವ ಮೂಲಕ ಕಾನೂನ ನಿಯಂತ್ರಣ ಮೀರಿ ವರ್ತಿಸಿರುವುದು, ನ್ಯಾಯಾಲಯಕ್ಕೆ ಸತತ ರಜೆ ಹಾಗೂ ಕಾರಂತರ ಆರೋಗ್ಯ ಸ್ಥಿತಿಯನ್ನು ಗಮನಿಸಿ ನ್ಯಾಯಾಲಯ ಕಾರಂತರಿಗೆ ಮದ್ಯಂತರ ಜಾಮೀನು ಮಂಜೂರು ಮಾಡಿದೆ. ಮುಂದಿನ ವಿಚಾರಣೆಯನ್ನು ಅಕ್ಟೋಬರ್ 3 ಕೈಗೆತ್ತಿಕೊಂಡಿದೆ.

ಪುತ್ತೂರು ನ್ಯಾಯಾಧೀಶರ ಮುಂದೆ ರಾತ್ರಿ 1.30 ರ ಸುಮಾರಿಗೆ ಪುತ್ತೂರು ಪೋಲೀಸರು ಜಗದೀಶ್ ಕಾರಂತರನ್ನು ಹಾಜರುಪಡಿಸಿದ್ದಾರೆ. ಜಗದೀಶ್ ಕಾರಂತರ ಪರ ವಕೀಲರಾದ ಮಹೇಶ್ ಕಜೆ ಬಂಧನದ ಮೊದಲು ಮಾಡಬೇಕಾಗಿದ್ದ ಕಾನೂನು ಪ್ರಕ್ರಿಯೆಗಳನ್ನು ಪೂರೈಸದ ಹಿನ್ನಲೆಯಲ್ಲಿ ಜಾಮೀನು ನೀಡಬೇಕೆಂದು ನ್ಯಾಯಾಧೀಶರನ್ನು ಕೋರಿದ್ದರು.

ವಕೀಲರ ವಾದನವನ್ನು ಪುರಸ್ಕರಿಸಿದ ನ್ಯಾಯಾಧೀಶರು ಜಗದೀಶ್ ಕಾರಂತ ಅವರಿಗೆ ಮದ್ಯಂತರ ಜಾಮೀನು ನೀಡಿದ್ದಾರೆ. ಜಮೀನಿನ ವಿಷಯ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಸೇರಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದರಲ್ಲದೆ ಜಗದೀಶ್ ಕಾರಂತ ಪರ ಘೋಷಣೆಗಳನ್ನೂ ಕೂಗಿದರು

Share Information
Continue Reading
Advertisement
Click to comment

Leave a Reply

Your email address will not be published. Required fields are marked *