Connect with us

    LATEST NEWS

    ಕುಖ್ಯಾತ ರೌಡಿ ಟಾರ್ಗೆಟ್ ಇಲ್ಯಾಸ್ ಕೊಲೆ, ದುಷ್ಕರ್ಮಿಗಳ ಕೃತ್ಯ

    ಕುಖ್ಯಾತ ರೌಡಿ ಟಾರ್ಗೆಟ್ ಇಲ್ಯಾಸ್ ಕೊಲೆ,ದುಷ್ಕರ್ಮಿಗಳ ಕೃತ್ಯ

    ಮಂಗಳೂರು,ಜನವರಿ 13: ಕುಖ್ಯಾತ ರೌಡಿ ಹಾಗೂ ಟಾರ್ಗೆಟ್ ಗ್ಯಾಂಗ್ ನ ಲೀಡರ್ ಇಲ್ಯಾಸ್ ನನ್ನು ಇಂದು ಮುಂಜಾನೆ ದುಷ್ಕರ್ಮಿಗಳು ಕೊಚ್ಚಿ ಕೊಲೆಗೈದಿದ್ದಾರೆ. ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ಈತ ಎರಡು ದಿನಗಳ ಹಿಂದೆ ಜಾಮೀನಿನ ಮೇಲೆ ಹೊರಗೆ ಬಂದಿದ್ದ. ಮಂಗಳೂರಿನ ಜಪ್ಪು ಕುಡ್ಪಾಡಿ ಎಂಬಲ್ಲಿರುವ ಪ್ಲಾಟ್ ನಲ್ಲಿ ಪತ್ನಿಯೊಂದಿಗೆ ಇದ್ದ ಸಂದರ್ಭದಲ್ಲಿ ಇಂದು ಮುಂಜಾನೆ ಮೂವರಿದ್ದ ತಂಡ ಮನೆ ಬಾಗಿಲನ್ನು ಬಡಿದಿದೆ.

    ಇಲ್ಯಾಸ್ ಪತ್ನಿ ಬಾಗಿಲು ತೆಗೆದ ಸಂದರ್ಭ ಮನೆಯೊಳಗೆ ನುಗ್ಗಿದ ತಂಡ ಮಲಗಿದ್ದ ಇಲ್ಯಾಸ್ ಮೇಲೆ ದಾಳಿ ಮಾಡಿದ್ದು, ಮಾರಕಾಯುಧಗಳಿಂದ ಕೊಚ್ಚಿ ಕೊಲೆ ಮಾಡಿದೆ. ಇಲ್ಯಾಸ್ ಒರ್ವ ಕುಖ್ಯಾತ ರೌಡಿಯಾಗಿದ್ದು, 18 ಕ್ಕೂ ಮಿಕ್ಕಿದ ಕೊಲೆ, ಸುಲಿಗೆ,ಅಪಹರಣ,ಅತ್ಯಾಚಾರ ಸೇರಿದಂತೆ ಹಲವು ಪ್ರಕರಣಗಳು ಈತನ ಮೇಲಿದೆ.

    ಸಚಿವ ಯು.ಟಿ.ಖಾದರ್ ಜೊತೆ ಗುರುತಿಸಿಕೊಂಡಿದ್ದ ಇಲ್ಯಾಸ್ ಯುವ ಕಾಂಗ್ರೇಸ್ ನ ಉಪಾಧ್ಯಕ್ಷನಾಗಿ ಕಾರ್ಯನಿರ್ವಹಿಸುತ್ತಿದ್ದ. ದೇರಳಕಟ್ಟೆಯಲ್ಲಿ ವೈದ್ಯಕೀಯ ವಿದ್ಯಾರ್ಥಿಗಳನ್ನು ಅಪಹರಣಗೈದು ಅವರ ಅಶ್ಲೀಲ ವಿಡಿಯೋ ಚಿತ್ರೀಕರಣ ಮಾಡಿ ಬ್ಲಾಕ್ ಮೇಲ್ ಮಾಡಿದ್ದ ಪ್ರಕರಣದ ಪ್ರಮುಖ ಆರೋಪಿಯೂ ಈತನಾಗಿದ್ದ.

    Share Information
    Advertisement
    Click to comment

    You must be logged in to post a comment Login

    Leave a Reply