Connect with us

    LATEST NEWS

    ಕೋಟೆಕಾರು ವ್ಯವಸಾಯ ಸಹಕಾರಿ ಬ್ಯಾಂಕ್ ಶಾಖೆಯಲ್ಲಿ ಮೂರು ಮಂದಿ ಕಾವಲುಗಾರರ ಸಾವು

    ಕೋಟೆಕಾರು ವ್ಯವಸಾಯ ಸಹಕಾರಿ ಬ್ಯಾಂಕ್ ಶಾಖೆಯಲ್ಲಿ ಮೂರು ಮಂದಿ ಕಾವಲುಗಾರರ ಸಾವು

    ಮಂಗಳೂರು ನವೆಂಬರ್ 7: ಕೋಟೆಕಾರು ವ್ಯವಸಾಯ ಸಹಕಾರಿ ಬ್ಯಾಂಕ್ ಶಾಖೆಯಲ್ಲಿ ಮೂರು ಮಂದಿ ಕಾವಲುಗಾರರು ಮೃತಪಟ್ಟ ಘಟನೆ ನಡೆದಿದೆ. ಮಂಗಳೂರು ಹೊರವಲಯದ ತಲಪಾಡಿ ಕೋಟೆಕಾರು ಬಳಿ ಈ ಘಟನೆ ನಡೆದಿದ್ದು, ಇಲ್ಲಿಯ ವ್ಯವಸಾಯ ಸಹಕಾರಿ ಬ್ಯಾಂಕ್ ಶಾಖೆಯಲ್ಲಿ ನಿನ್ನೆ ರಾತ್ರಿ ಮಲಗಿದ್ದ ಮೂರು ಮಂದಿ ಕಾವಲುಗಾರರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.

    ಮೃತರನ್ನು ಉಮೇಶ್, ಸಂತೋಷ್, ಸೋಮನಾಥ್ ಎಂದು ಗುರುತಿಸಲಾಗಿದೆ ಇವರು ಹೇಗೆ ಮೃತ ಪಟ್ಟಿದ್ದಾರೆ ಎಂಬುದು ನಿಗೂಢವಾಗಿದೆ ಘಟನೆ ನಡೆದ ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ .

    ಈ ಸಹಕಾರಿ ಸಂಘದ ಶಾಖೆಯಲ್ಲಿ ಈ ಹಿಂದೆ ಜೂನ್ 23 ರಂದು ಚಿನ್ನಾಭರಣ ದರೋಡೆ ವಿಫಲ ಯತ್ನ ನಡೆದಿತ್ತು ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸಿ ಈ ಸಹಕಾರಿ ಬ್ಯಾಂಕ್ ಗೆ ನುಗ್ಗಿದ ಇಬ್ಬರು ಚಿನ್ನಾಭರಣ ದರೋಡೆಗೆ ವಿಫಲ ಯತ್ನ ನಡೆಸಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply