LATEST NEWS
ಕೋಡಿಂಬಾಡಿ ಸಾಲ ಬಾಧೆಯಿಂದ ವ್ಯಕ್ತಿ ಆತ್ಮಹತ್ಯೆ
ಕೋಡಿಂಬಾಡಿ ಸಾಲ ಬಾಧೆಯಿಂದ ವ್ಯಕ್ತಿ ಆತ್ಮಹತ್ಯೆ
ಪುತ್ತೂರು ನವೆಂಬರ್ 28: ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ಳಿಪ್ಪಾಡಿ ಗ್ರಾಮದ ಕೋಡಿಂಬಾಡಿ ಎಂಬಲ್ಲಿ ನಡೆದಿದೆ.
ಕೋಡಿಂಬಾಡಿ ದಿ. ರಘುರಾಮ ಶೆಟ್ಟಿ ಅವರ ಪುತ್ರ ಜಯಪ್ರಕಾಶ್ ಶೆಟ್ಟಿ(41) ಆತ್ಮಹತ್ಯೆ ಮಾಡಿಕೊಂಡವರು.
ಜಯಪ್ರಕಾಶ್ ಶೆಟ್ಟಿಯವರು ಕೋಡಿಂಬಾಡಿಯಲ್ಲಿ ಕ್ಯಾಂಟೀನ್ ನಡೆಸಿಕೊಂಡಿದ್ದರು. ಕೆಲವು ಸಮಯಗಳಿಂದ ಅನಾರೋಗ್ಯದಿಂದ ಮತ್ತು ಸಾಲ ಬಾದೆಯಿಂದಾಗಿ ನೊಂದು ಮನೆಯ ಸಮೀಪದ ಹಲಸಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You must be logged in to post a comment Login