Connect with us

    UDUPI

    ಕ್ರೀಡಾಕೂಟಗಳಿಂದ ನೌಕರರಲ್ಲಿ ಒಗ್ಗಟ್ಟು – ಭ್ರಾತೃತ್ವ ವೃಧ್ಧಿ :ಪ್ರಮೋದ್ ಮಧ್ವರಾಜ್

     ಕ್ರೀಡಾಕೂಟಗಳಿಂದ ನೌಕರರಲ್ಲಿ ಒಗ್ಗಟ್ಟು – ಭ್ರಾತೃತ್ವ ವೃಧ್ಧಿ :ಪ್ರಮೋದ್ ಮಧ್ವರಾಜ್

    ಉಡುಪಿ, ಜನವರಿ 11: ಪ್ರತಿದಿನ ಏಕತಾ ಕೂಡಿದ ಕೆಲಸದಲ್ಲಿ ತೊಡಗುವ ಹಾಗೂ ಒತ್ತಡದಲ್ಲಿ ಕೆಲಸ ಮಾಡುವ ಸರಕಾರಿ ನೌಕರರು ಕ್ರೀಡಾಕೂಟದಲ್ಲಿ ಭಾಗವಹಿಸುವುದರಿಂದ , ನೌಕರರಲ್ಲಿ ಭ್ರಾತೃತ್ವ ಭಾವನೆ ಮೂಡಿ, ನಾವೆಲ್ಲರೂ ಒಂದೇ ಎನ್ನುವ ಒಗ್ಗಟ್ಟು ಮೂಡುವುದರ ಜೊತೆಗೆ , ದೈನಂದಿನ ಒತ್ತಡ ನಿವಾರಣೆ ಅಗಲಿದೆ ಎಂದು ಮೀನುಗಾರಿಕೆ, ಯುವಜನ ಸಬಲೀಕರಣ, ಕ್ರೀಡಾ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮದ್ವರಾಜ್ ಹೇಳಿದ್ದಾರೆ.

    ಅವರು ಗುರುವಾರ, ಉಡುಪಿಯ ಅಜ್ಜರಕಾಡು ಕ್ರೀಡಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ, ರಾಜ್ಯ ಸರಕಾರಿ ನೌಕರರ ಉಡುಪಿ ಜಿಲ್ಲಾಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ದೇಗಳು 2017-18 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ರಾಜ್ಯದಲ್ಲಿ ಸುಮಾರು ಶೇ.50 ರಷ್ಟು ಸರಕಾರಿ ಹುದ್ದೆಗಳು ಖಾಲಿ ಇವೆ, ರಾಜ್ಯದಲ್ಲಿ 1978-79 ರ ಜನಸಂಖ್ಯೆಗೆ ಅನುಗುಣವಾಗಿ ಸೃಷ್ಠಿಯಾಗಿದ್ದ ಹುದ್ದೆಗಳು ಮತ್ತೆ ಪರಿಷ್ಕರಣೆ ಆಗಿಲ್ಲ, ಆದರೂ ಸಹ ನೌಕರರು ಸರಕಾರದ ವಿವಿಧ ಯೋಜನೆಗಳು, ಕಾರ್ಯಕ್ರಮಗಳನ್ನು ಸಾರ್ವಜನಿಕರಿಗೆ ತಲುಪಿಸುವ ಜವಾಬ್ದಾರಿಯನ್ನು ಯಶಸ್ವಿಯಾಗಿ ಮಾಡುತ್ತಿದ್ದಾರೆ, ಅದರಲ್ಲೂ ಉಡುಪಿ ಜಿಲ್ಲೆಯ ಸರಕಾರಿ ನೌಕರರು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ರಾಜ್ಯದಲ್ಲಿಯೇ ಸರ್ವಶ್ರೇಷ್ಠರು ಎಂದು ಸಚಿವರು ಹೇಳಿದರು.

    ರಾಜ್ಜ ಸರಕಾರಿ ನೌಕರರ ವೇತನ ಪರಿಷ್ಕರಣೆ ಯನ್ನು ಚುನಾವಣೆಗಿಂತ ಮುಂಚೆ ಅನುಷ್ಠಾನಕ್ಕೆ ತರುವ ಬಗ್ಗೆ ಹಾಗೂ ಉತ್ತಮ ರೀತಿಯಲ್ಲಿ ವೇತನ ಪರಿಷ್ಕರಣೆಯನ್ನು ಮುಖ್ಯಮಂತ್ರಿಗಳು ಮಾಡಲಿದ್ದಾರೆ ಎಂದು ಸಚಿವರು ಹೇಳಿದರು.
    ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸುವ ಸರಕಾರಿ ನೌಕರರಿಗೆ ಓಓಡಿ ನೀಡುವ ಸಂಬಂದ ನಿಯಮಗಳಿಗೆ ತಿದ್ದುಪಡಿ ಮಾಡುವ ಕುರಿತಂತೆ ಪರಿಶೀಲಿಸುವುದಾಗಿ ಸಚಿವರು ಹೇಳಿದರು.
    ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಬಹುಮಾನ ಪಡೆದ ನೌಕರರಾದ, ಉದಯ್ ಕುಮಾರ್ ಶೆಟ್ಟಿ, ಅರುಣ್ ಕುಮಾರ್, ಸುನಿತಾ , ಸ್ಮಿತಾ ಫರ್ನಾಂಡಿಸ್, ಮಾಲಿನಿ, ಆಶಾ, ರಂಜಿತ್ ಕುಮಾರ್, ಕಾರ್ತಿಕೇಯ ಭಟ್,ಅಶ್ವಿನ್ ಸನಿಲ್, ಯಮುನಾ ಕುಮಾರಿ, ಗಣೇಶ್ ಶೆಟ್ಟಿ, ಮಂಜುನಾಥ್ ಐತಾಳ್, ಸುನೀಶ್ ಬಾಬು ಮತ್ತಿತರಿಗೆ ಸಚಿವರು ನಗದು ಬಹುಮಾನ ವಿತರಿಸಿದರು.

    ಕಾರ್ಯಕ್ರಮದಲ್ಲಿ, ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತ ಹೋಳಿಯಪ್ಪ, ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಕಿರಣ್ ಹೆಗ್ಡೆ, ಕಾರ್ಕಳ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಮೈಕಲ್ ಜೋಕಿಂ ಪಿಂಟೋ, ಕುಂದಾಪುರ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ದಿನಕರ ಶೆಟ್ಟಿ ಅಂಪಾರು, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಮಧುಕರ್ , ಜಿಲ್ಲಾ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಅರುಣ್ ಮಾ ಲೋಕರೆ, ಕೋಶಾಧಿಕಾರಿ ಚಂದ್ರಶೇಖರ್ ಉಪಸ್ಥಿತರಿದ್ದರು. ರಾಮಕೃಷ್ಣ ಕ್ರೀಡಾ ಪ್ರತಿಜ್ಞೆ ಭೋದಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply