Connect with us

    LATEST NEWS

    ಗಣಪತಿ ಆತ್ಮಹತ್ಯೆ ಸಂದರ್ಭ ಯಾವುದೇ ಕಾಲ್ ಬಂದಿಲ್ಲ;ಶಾಸಕ ವಿನಯ್ ಕುಮಾರ್ ಸೊರಕೆ ಸ್ಪಷ್ಟನೆ

    ಉಡುಪಿ, ಆಗಸ್ಟ್ 24 : ಡಿವೈಎಸ್ಪಿ ಗಣಪತಿ ಸಾವು ಪ್ರಕರಣದಲ್ಲಿ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಯಲ್ಲಿ ಗಣಪತಿ ಪೋನಿನಲ್ಲಿರುವ ದಾಖಲೆಗಳನ್ನು ನಾಶಮಾಡಲಾಗಿದೆ. ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಸೇರಿದಂತೆ 30 ಜನರ ಕಾಲ್ ಡಿಟೇಲ್ಸ್ ಡಿಲಿಟ್ ಎಂಬ ವಿಚಾರಕ್ಕೆ ಉಡುಪಿಯಲ್ಲಿ ಶಾಸಕ ವಿನಯ್ ಕುಮಾರ್ ಸೊರಕೆ ಪ್ರತಿಕ್ರಿಯೆ ನೀಡಿದ್ದು ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಸಂದರ್ಭ ಯಾವುದೇ ನನಗೆ ಕಾಲ್ ಬಂದಿಲ್ಲ. ನಾನು ಅವರಿಗೆ ಕಾಲ್ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪುತ್ತೂರಲ್ಲಿ ಶಾಸಕನಾಗಿದ್ದಾಗ ಗಣಪತಿ ಸಬ್ ಇನ್ಸ್ಪೆಕ್ಟರ್ ಆಗಿದ್ದರು. ಉತ್ತಮ, ಕಟ್ಟುನಿಟ್ಟಿನ ಅಧಿಕಾರಿಯಾಗಿದ್ದರು, ಈ ಸಂದರ್ಭದಲ್ಲಿ ಅವರ ಸಂಪರ್ಕ ಇತ್ತು. ಅಮಾನತು ಆದ ಸಂದರ್ಭದಲ್ಲಿಯೂ ನನ್ನ ಸಂಪರ್ಕ ಮಾಡಿದ್ದರು. ಮಂತ್ರಿಯಾಗಿದ್ದ ಸಂದರ್ಭದಲ್ಲಿ ಮನೆಗೂ ಬರುತ್ತಿದ್ದರು.ಅಮಾನತು ವಾಪಾಸ್ ಪಡೆದುಕೊಳ್ಳಲು ಕಮಿಷನರ್ ಗೆ, ಗೃಹಸಚಿವರ ಜೊತೆ ಮಾತನಾಡುವಂತೆ ಮನವಿ ಮಾಡಿದ್ದರು.ಗೃಹಸಚಿವರಾಗಿದ್ದ ಸಚಿವ ಜಾರ್ಜ್ ಅವರೆ ಅವರಿಗೆ ಸಹಾಯ ಮಾಡಿದ್ದರು. ಆ ಬಳಿಕ ಯಾವುದೇ ಸಂಪರ್ಕ ಇರಲಿಲ್ಲ ಎಂದು ವಿನಯ್ ಕುಮಾರ್ ಸೊರಕೆ ಸ್ಪಷ್ಟಪಡಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply