Connect with us

    DAKSHINA KANNADA

    ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ದ ಮೋಸ್ಟ್ ಡೇಂಜರಸ್ ಪೊಯಿಜನ್ ಪೊಲೀಟೀಶಿಯನ್ – ಕಾಂಗ್ರೇಸ್ ಮಾಜಿ ವಕ್ತಾರ ಹರಿಕೃಷ್ಣ ಬಂಟ್ವಾಳ

    Still0712_00002ಜುಲೈ 12  – ದಕ್ಷಿಣಕನ್ನಡ ಜಿಲ್ಲೆಯಲ್ಲಿ ಶಾಂತಿ ಸಾಮರಸ್ಯ ನೆಲೆಸಬೇಕಾದರೆ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ದ ಮೋಸ್ಟ್ ಡೇಂಜರಸ್ ಪೊಯಿಜನ್ ಪೊಲೀಟೀಶಿಯನ್ ಎಂದು ಕಾಂಗ್ರೇಸ್ ಮಾಜಿ ವಕ್ತಾರ ಹರಿಕೃಷ್ಣ ಬಂಟ್ವಾಳ ವಾಗ್ದಾಳಿ ನಡೆಸಿದ್ದಾರೆ.
    ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಂಗ್ರೇಸ್ ಹಿರಿಯ ಮುಖಂಡ ಬಿ. ಜನಾರ್ಧನ ಪೂಜಾರಿ ಅವರಿಗೆ ಸಚಿವ ರಮಾನಾಥ ರೈ ಕೀಳು ಮಟ್ಟದ ಪದಗಳನ್ನು ಬಳಸಿ ನಿಂದಿಸಿದ ಬಗ್ಗೆ ಅವರು ಪ್ರಸ್ತಾಪಿಸಿದರು. ಪೂಜಾರಿ ಅವರನ್ನು ನಿಂದಿಸಿಲ್ಲ ಎಂದು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲು ಸಚಿವ ರಮಾನಾಥ ರೈ ಅವರಿಗೆ ನೀಡಿದ ಗಡುವು ಮುಗಿದಿದ್ದು ಈ ಹಿನ್ನಲೆಯಲ್ಲಿ ಪೂಜಾರಿ ಅವರನ್ನು ನಿಂದಿಸಿರುವುದು ಸಾಭೀತಾಗಿದೆ ಎಂದು ಅವರು ಹೇಳಿದರು. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಶಾಂತಿ ಸಾಮರಸ್ಯ ನೆಲಸಬೇಕಾದರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಅವರನ್ನು ಈ ಕೂಡಲೇ ಅವರ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಅವರು ಒತ್ತಾಯಿಸಿದರು. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಲು ಸಚಿವ ರಮಾನಾಥ ರೈ ಕಾರಣವಾಗಿದ್ದು ಅತ್ಯಂತ ಅಪಾಯಕಾರಿ ರಾಜಕಾರಣಿ ಎಂದು ಅವರು ವಾಗ್ದಾಳಿ ನಡೆಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply