Connect with us

    DAKSHINA KANNADA

    ಜೆ ಡಿ ಎಸ್ ಕುಟುಂಬದಲ್ಲಿ ಯಾವುದೇ ಭಿನ್ನಮತವಿಲ್ಲ : ಹೆಚ್.ಡಿ.ರೇವಣ್ಣ

    ಸುಳ್ಯ, ಜುಲೈ.19: ಜೆ ಡಿ ಎಸ್ ಕುಟುಂಬದಲ್ಲಿ ಯಾವುದೇ ಭಿನ್ನಮತವಿಲ್ಲ , ತಂದೆ ದೇವೇಗೌಡರ‌ ಮಾರ್ಗದರ್ಶನ ಮತ್ತು ರಾಜ್ಯಾಧ್ಯಕ್ಷ ಕುಮಾರಸ್ವಾಮಿ ನೇತೃತ್ವದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಮಾಜಿ ಸಚಿವ ಎಚ್‌.ಡಿ. ರೇವಣ್ಣ ಹೇಳಿದ್ದಾರೆ.

    ಮಂಗಳವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ಮಾಜಿ ಸಚಿವ ರೇವಣ್ಣ ಅವರು ಆಶ್ಲೇಷಾ ಬಲಿ ಸೇವೆ ನೆರವೇರಿಸಿ ಬಳಿಕ ಶ್ರೀ ದೇವರ ದರ್ಶನ ಪಡೆದು ಮಹಾಪೂಜೆ ನೆರವೇರಿ ಸಿದರು. ಈ ಸಂದರ್ಭದಲ್ಲಿ ದೇವಾಲಯದ ಅರ್ಚಕರು ಶಾಲು ಹೊದೆಸಿ ಮಹಾಪ್ರಸಾದ ನೀಡಿ ಗೌರವಿಸಿದ‌ರು. ರೇವಣ್ಣ ಅವ ರೊಂದಿಗೆ ಪತ್ನಿ ಭವಾನಿ ರೇವಣ್ಣ ಹಾಗೂ ಪುತ್ರ ಪ್ರಜ್ವಲ್‌ ರೇವಣ್ಣ ಆಗಮಿಸಿದ್ದರು.

    ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದಬ ಅವರು ಮುಂದಿನ ಚುನಾವಣೆಯಲ್ಲಿ ಪಕ್ಷ ಅಧಿಕಾರ ಬರಲು ಈಗಾಗಲೇ ಬೂತ್‌ ಮಟ್ಟಲ್ಲಿ ಪಕ್ಷ ಸಂಘಟನಾ ಕಾರ್ಯ ಆರಂಭ ವಾಗಿದೆ. ಅಭ್ಯರ್ಥಿ ಆಯ್ಕೆಯನ್ನು ಪಕ್ಷದ ಹಿರಿಯ ನಾಯಕರನ್ನೊಳಗೊಂಡ ಕೋರ್‌ ಕಮಿಟಿ ನಿರ್ಧರಿಸಲಿದೆ. ಹಿಂದೆ ದೇವೇಗೌಡರು ಪ್ರಧಾನಿಯಾಗಿದ್ದಾಗ ನಡೆಸಿದ ಕಲ್ಯಾಣ ಕಾರ್ಯಕ್ರಮಗಳು ಮತ್ತು ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ನೀಡಿದ ಜನಪರ ಅಭಿವೃದ್ಧಿ ಕಾರ್ಯಕ್ರಮಗಳನ್ನಿಟ್ಟುಕೊಂಡು ಪಕ್ಷ ಚುನಾವಣೆಯನ್ನು ಎದುರಿಸಲಿದೆ.

     

     

    Share Information
    Advertisement
    Click to comment

    You must be logged in to post a comment Login

    Leave a Reply