LATEST NEWS
ತಮಿಳುನಾಡು ಬಿಜೆಪಿ ಕಚೇರಿ ಮೇಲೆ ದುಷ್ಕರ್ಮಿಗಳಿಂದ ಪೆಟ್ರೋಲ್ ಬಾಂಬ್ ದಾಳಿ
ತಮಿಳುನಾಡು ಬಿಜೆಪಿ ಕಚೇರಿ ಮೇಲೆ ದುಷ್ಕರ್ಮಿಗಳಿಂದ ಪೆಟ್ರೋಲ್ ಬಾಂಬ್ ದಾಳಿ
ಚೆನ್ನೈ,ಮಾರ್ಚ್ 07 :ತಮಿಳುನಾಡು ಬಿಜೆಪಿ ಕಚೇರಿ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.
ತಮಿಳುನಾಡಿನ ಕೊಯಮತ್ತೂರಿನಲ್ಲಿನ ಬಿಜೆಪಿ ಕಚೇರಿ ಮೇಲೆ ಇಂದು ಮುಂಜಾನೆ ಈ ಪೆಟ್ರೋಲ್ ಬಾಂಬ್ ದಾಳಿಯನ್ನು ದುಷ್ಕರ್ಮಿಗಳು ನಡೆಸಿದ್ದಾರೆ.
ಘಟನೆಗೆ ಸ್ಪಷ್ಟ ಕಾರಣ ಇನ್ನೂ ಗೊತ್ತಾಗಿಲ್ಲವಾದರೂ ತಮಿಳುನಾಡಿನಲ್ಲಿರುವ ಪೆರಿಯಾರ್ ಮೂರ್ತಿಗೆ ಹಾನಿ ಮಾಡಿರುವ ಘಟನೆಗೆ ಪ್ರತಿಯಾಗಿ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆದಿರಬಹುದೆಂದು ಪೋಲಿಸರು ಶಂಕಿಸಿದ್ದಾರೆ.
ದುಷ್ಕರ್ಮಿಗಳು ಬಾಂಬ್ ದಾಳಿ ನಡೆಸಿರುವ ಘಟನೆಯ ಚಿತ್ರಣ ಕಚೇರಿಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
You must be logged in to post a comment Login