Connect with us

DAKSHINA KANNADA

ದೇಶದ 14 ನೇ ರಾಷ್ಟ್ರಪತಿಯಾಗಿ ರಮನಾಥ್ ಕೊವಿಂದ ಆಯ್ಕೆ: ಮಂಗಳೂರಿನಲ್ಲಿ ಬಿಜೆಪಿ ಸಂಭ್ರಮ..

ಮಂಗಳೂರು, ಜುಲೈ.20 : ದೇಶದ 14 ನೇ ರಾಷ್ಟ್ರಪತಿಯಾಗಿ ಎನ್ ಡಿ ಎ ಅಭ್ಯರ್ಥಿ ಕಾನೂನು ಪಂಡಿತರಾದ ರಮನಾಥ್ ಕೊವಿಂದ ಅವರು ಆಯ್ಕೆಯಾಗಿದ್ದಾರೆ .ಇಂದು ನವದೆಹಲಿಯ ಸಂಸತ್ ಭವನದಲ್ಲಿ ನಡೆದ ನೂತನ ರಾಷ್ಟ್ರಪತಿ ಆಯ್ಕೆಯ ಚುನಾವಣಾ ಫಲಿತಾಂಶದಲ್ಲಿ ಪ್ರತಿಪಕ್ಷದ ಅಭ್ಯರ್ಥಿ ಮೀರಾ ಕುಮಾರ್ ಅವರನ್ನು ಅತ್ಯಧಿಕ ಮತಗಳ ಅಂತರದಲ್ಲಿ ಸೋಲಿಸಿ ಎನ್ ಡಿ ಎ ಅಭ್ಯರ್ಥಿ ರಮನಾಥ್ ಕೋವಿಂದ್ ಅವರು ರಾಷ್ಟ್ರಪತಿಯಾಗಿ ಆಯ್ಕೆಯಾಗುವುದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹರ್ಷ ವ್ಯಕ್ತವಾಗಿದೆ.

ಮಂಗಳೂರಿನಲ್ಲಿ ಜಿಲ್ಲಾ ಬಿಜೆಪಿ ಕಾರ್ಯಾಲಯದ ಎದುರು ಕಾರ್ಯಕರ್ತರು ಸಿಹಿ ತಿಂಡಿ ಹಂಚಿ ಸಂಭ್ರಮಿಸುವುದರೊಂದಿಗೆ ಕೋವಿಂದ್ ಅವರ ಆಯ್ಕೆಗೆ ಹರ್ಷ ವ್ಯಕ್ತ ಪಡಿಸಿದರು. ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಟಂದೂರು, ಮಾಜಿ ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ, ಸೇರಿದಂತೆ ನೂರಾರು ಕಾರ್ಯಕರ್ತರು ಹಾಗೂ ಮತ್ತಿತರ ಮುಖಂಡರು ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು.

 ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಟಂದೂರು  ನೂತನ ರಾಷ್ಪ್ರಪತಿಗಳಾದ ರಮನಾಥ್ ಕೊವಿಂದ್ ಅವರಿಂದ ಭಾರತ ದೇಶ ಮುಂದಿನ ದಿನಗಳಲ್ಲಿ ಇನಷ್ಟು ಸುಭಧ್ರಗೊಳ್ಳಲಿ ಎಂದು ಶುಭ ಹಾರೈಸಿದರು . ಎನ್ ಡಿ ಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿದ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಧ್ಯಕ್ಷ ಅಮಿತ್ ಷಾ ಅವರಿಗೆ ಧನ್ಯವಾದ ಸಲ್ಲಿಸಿದರು. ಪ್ರಸ್ತುತ ರಾಷ್ಟ್ರಪತಿಯಾಗಿರುವ ಪ್ರಣವ್ ಮುಖರ್ಜಿ ಅವರ ಅಧಿಕಾರ ಅವಧಿ ಜುಲೈ 24 ರಂದು ಕೊನೆಗೊಳ್ಳಲಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *