Connect with us

    DAKSHINA KANNADA

    ನಾಳೆಯಿಂದ ಶಿರಾಢಿಘಾಟ್ ಬಂದ್, ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ

    ನಾಳೆಯಿಂದ ಶಿರಾಢಿಘಾಟ್ ಬಂದ್, ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ

    ಮಂಗಳೂರು,ಜನವರಿ 19: ರಾಷ್ಟ್ರೀಯ ಹೆದ್ದಾರಿ-75 ಬೆಂಗಳೂರು- ಮಂಗಳೂರು ರಸ್ತೆಯ ಶಿರಾಡಿ ಘಾಟ್ ಜನವರಿ 20 ಅಂದರೆ ನಾಳೆಯಿಂದ ಬಂದ್ ಆಗಲಿದೆ.

    ಶಿರಾಢಿ ಘಾಟ್ ಕೆಂಪುಹೊಳೆ ಗೆಸ್ಟ್ ಹೌಸ್ ನಿಂದ ಅಡ್ಡಹೊಳೆರವರೆಗಿನ ರಸ್ತೆ ಅಭಿವೃದ್ದಿಪಡಿಸುವ ಉದ್ಧೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಕಾಮಗಾರಿ ಮುಗಿಯುವ ತನಕ ಶಿರಾಢಿಘಾಟ್ ರಸ್ತೆಯಲ್ಲಿ ಎಲ್ಲಾ ವಾಹನಗಳ ಸಂಚಾರ ನಿಷೇಧಿಸಲಾಗಿದೆ.

    ಈ ಹಿನ್ನೆಲೆಯಲ್ಲಿ ಈಗ ಉದ್ದೇಶಿಸಲಾಗಿರುವ ರಸ್ತೆ ಕಾಮಗಾರಿಯನ್ನು ನಿರ್ವಹಿಸಲು ಸಕಲೇಶಪುರ ರಾಷ್ಟ್ರೀಯ ಹೆದ್ದಾರಿ ಮಾರನಹಳ್ಳಿ ಪೋಲೀಸ್ ಔಟ್ ಪೋಸ್ಟ್ ಕಾಡುಮನೆ ಎಸ್ಟೇಟ್ ರೋಡ್ ಜಂಕ್ಷನ್ ನಿಂದ ಗುಂಡ್ಯಾ ವರೆಗಿನ ರಸ್ತೆ ಭಾಗವನ್ನು ವಾಹನ ಸಂಚಾರಕ್ಕೆ ಜನವರಿ 20 ರಂದು ಬೆಳಿಗ್ಗೆ 6 ಘಂಟೆಯಿಂದ ಕಾಮಗಾರಿ ಮುಕ್ತಾಯಗೊಳ್ಳುವವರೆಗೆ ಬಂದ್ ಮಾಡುವ ಆದೇಶವನ್ನು ರಾಷ್ಟ್ರೀಯ ಹೆದ್ದಾರಿ ಇಲಾಖೆ ಹೊರಡಿಸಿದೆ.

    ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ನಿಷೇದಿಸುವ ನಿಮಿತ್ತ   ಲಘು ವಾಹನಗಳು (ಸಾಮಾನ್ಯ ಬಸ್ಸುಗಳು, ಜೀಪು, ವ್ಯಾನು, ಎಲ್.ಸಿ.ವಿ. (ಮಿನಿ ವ್ಯಾನ್) ದ್ವಿಚಕ್ರ ವಾಹನಗಳು)       ಹಾಸನ-ಬೇಲೂರು(ರಾಜ್ಯ ಹೆದ್ದಾರಿ-57)-ಮೂಡಿಗೆರೆ-ಚಾರ್ಮುಡಿಘಾಟ್- ಬೆಳ್ತಂಗಡಿ-ಉಜಿರೆ- ಬಿ.ಸಿ.ರೋಡು (ರಾಷ್ಟ್ರೀಯ ಹೆದ್ದಾರಿ 234)- ಮಂಗಳೂರು (ರಾಷ್ಟ್ರೀಯ ಹೆದ್ದಾರಿ 75), ಹಾಸನ-ಸಕಲೇಶಪುರ-ಆನೆಮಹಲ್ (ರಾಷ್ಟ್ರೀಯ ಹೆದ್ದಾರಿ-75) ಹಾನ್‍ಬಾಳ್-ಜೆನ್ನಾಪುರ(ರಾಜ್ಯ ಹೆದ್ಸಾರಿ-27) ಮೂಡಿಗೆರೆ-ಚಾರ್ಮುಡಿ ಘಾಟ್-ಬೆಳ್ತಂಗಡಿ -ಉಜಿರೆ-ಬಿ.ಸಿ.ರಸ್ತೆ (ರಾಷ್ಟ್ರೀಯ ಹೆದ್ದಾರಿ 234)-ಮಂಗಳೂರು (ರಾಷ್ಟ್ರೀಯ ಹೆದ್ದಾರಿ 75), ಬೆಂಗಳೂರು-ಹಾಸನ-ಮೂಡಿಗೆರೆ-ಕೊಟ್ಟಿಗೆಹಾರ-ಕಳಸ-ಕುದುರೆಮುಖ- ಮಾಲಘಾಟ್-ಕಾರ್ಕಳ-ಉಡುಪಿ, ಮಂಗಳೂರು-ಬಿ.ಸಿ.ರಸ್ತೆ ಮಾಣಿ(ರಾಷ್ಟ್ರೀಯ ಹೆದ್ದಾರಿ 75)-ಪುತ್ತೂರು-ಮಡಿಕೇರಿ-ಹುಣಸೂರು(ರಾಷ್ಟ್ರೀಯ ಹೆದ್ದಾರಿ 275) -ಮೈಸೂರು-ಮಂಡ್ಯ-ರಾಮನಗರ-ಬೆಂಗಳೂರು, ಬೆಂಗಳೂರು-ಶಿವಮೊಗ್ಗ-ಆಯನೂರು-ಹೊಸನಗರ ಮಾಸ್ತಿಕಟ್ಟೆ-ಬಾಳೆಬಾರೆಘಾಟ್-ಹೊಸಂಗಡಿ ಸಿದ್ದಾಪುರ-ಕುಂದಾಪುರ ಮಾರ್ಗದಲ್ಲಿ ಚಲಿಸಬಹುದಾಗಿದೆ.

    ಭಾರಿ ವಾಹನಗಳು ( ರಾಜಹಂಸ, ಐರಾವತ ಬಸ್ಸುಗಳು ಮತ್ತು ಖಾಸಗಿ ಲಕ್ಸುರಿ ಬಸ್ಸುಗಳು ಮತ್ತು ಬುಲೆಟ್ ಟ್ಯಾಂಕರ್ಸ್, ಷಿಪ್ ಕಾರ್ಗೊ ಕಂಟೈನರ್ಸ್, ಲಾಂಗ್ ಚಾಸೀಸ್ ವಾಹನಗಳು) ಮಂಗಳೂರು-ಬಿ.ಸಿ.ರೋಡು- ಮಾಣಿ(ರಾಷ್ಟ್ರೀಯಹೆದ್ದಾರಿ75)-ಪುತ್ತೂರು- ಮಡಿಕೇರಿ ಹುಣಸೂರು (ರಾಷ್ಟ್ರೀಯ ಹೆದ್ದಾರಿ-275)-ಕೆ.ಆರ್.ನಗರ-ಹೊಳೆನರಸಿಪುರ-ಹಾಸನ (ರಾಜ್ಯ ಹೆದ್ದಾರಿ 57), ಮಂಗಳೂರು-ಬಿ.ಸಿ.ರಸ್ತೆ, ಮಾಣಿ(ರಾಷ್ಟ್ರೀಯಹೆದ್ದಾರಿ-75) – ಪುತ್ತೂರು – ಮಡಿಕೇರಿ -ಹುಣಸೂರು (ರಾಷ್ಟ್ರೀಯ ಹೆದ್ದಾರಿ 275)-ಮೈಸೂರು-ಮಂಡ್ಯ-ರಾಮನಗರ-ಬೆಂಗಳೂರು, ಬೆಂಗಳೂರು-ಶಿವಮೊಗ್ಗ-ಆಯನೂರು-ಹೊಸನಗರ, ಮಾಸ್ತಿಕಟ್ಟೆ-ಬಾಳೆಬಾರೆಘಾಟ್ ಹೊಸಂಗಡಿ ಸಿದ್ದಾಪುರ-ಕುಂದಾಪುರ, ಬೆಂಗಳೂರು-ನೆಲಮಂಗಲ-ಶಿವಮೊಗ್ಗ-ಸಾಗರ-ಹೊನ್ನಾವರ-ಮುರುಡೇಶ್ವರ-ಕುಂದಾಪುರ-ಉಡುಪಿ-ಮಂಗಳೂರು ಮಾರ್ಗದಲ್ಲಿ ಚಲಿಸಲು ಅವಕಾಶ ಕಲ್ಪಿಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply