Connect with us

    LATEST NEWS

    ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ – ಕೋಟ ಶ್ರೀನಿವಾಸ ಪೂಜಾರಿ

    ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ – ಕೋಟ ಶ್ರೀನಿವಾಸ ಪೂಜಾರಿ

    ಉಡುಪಿ ನವೆಂಬರ್ 9 : ರಾಜ್ಯದಲ್ಲಿ ಟಿಪ್ಪು ಜಯಂತಿ ವಿರೋಧಿಸಿ ಬಿಜೆಪಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದೆ. ಈ ನಡುವೆ ಉಡುಪಿಯಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿರುವುದಕ್ಕೆ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಉಡುಪಿಯಲ್ಲಿ ಮಾತನಾಡಿದ ಅವರು ಸಿ.ಎಂ ಸಿದ್ದರಾಮಯ್ಯ ಅವರು ಇಡೀ ರಾಜ್ಯವನ್ನು ಜೈಲು ಮಾಡಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಟಿಪ್ಪು ಜಯಂತಿಯನ್ನು ಬಿಜೆಪಿ ವಿರೋಧಿಸುತ್ತದೆ ಎಂದು ಹೇಳಿದ ಅವರು ಟಿಪ್ಪು ಜಯಂತಿ ವಿಚಾರದಲ್ಲಿ ರಾಜ್ಯಾದ್ಯಂತ ಹತ್ಯೆ ಸಾವು ನೋವು ನಡೆದಿದೆ, ರಾಜ್ಯದಲ್ಲಿ ಶಾಂತಿಭಂಗ ಚಟುವಟಿಕೆ ಹೆಚ್ಚಾಗಿದೆ, ವಿಪಕ್ಷಗಳು, ಇತಿಹಾಸ ತಜ್ಞರೂ ಸರ್ಕಾರಕ್ಕೆ ಸಾಕಷ್ಟು ಬುದ್ದಿಮಾತು ಹೇಳಿವೆ ಆದರೂ ಸರಕಾರ ಟಿಪ್ಪುಜಯಂತಿ ಆಚರಣೆಗೆ ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಜಿಲ್ಲಾಡಳಿತ ಉಡುಪಿ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿರುವುದನ್ನು ವಿರೋಧಿಸಿದ ಕೋಟ ಶ್ರೀನಿವಾಸ ಪೂಜಾರಿ , ಸೆಕ್ಷನ್ 144 ಹಾಕಿದ್ರೂ ಪ್ರತಿಭಟನೆ ನಡೆಸುತ್ತೆವೆ ಎಂದು ಹೇಳಿದರು. ರಾಜ್ಯದ ಎಲ್ಲಾ ಕಡೆ 144 ಸೆಕ್ಷನ್ ಜಾರಿ ಆಗಿದೆ. ಇದು ಪ್ರಜಾತಂತ್ರ ವ್ಯವಸ್ಥೆಗೆ ಭೂಷಣವಲ್ಲ ಎಂದ ಅವರು ಟಿಪ್ಪು ಜಯಂತಿ ವಿರೋಧಿಸಿ ಪ್ರತಿಭಟನೆ ನಡೆಸಿ ನಿಷೇಧಾಜ್ಞೆ ಉಲ್ಲಂಘಿಸುತ್ತವೆ ಎಂದು ಹೇಳಿದರು.

    Share Information
    Advertisement
    Click to comment

    You must be logged in to post a comment Login

    Leave a Reply