Connect with us

    LATEST NEWS

    ಪರೇಶ್ ಮೇಸ್ತ ಹತ್ಯೆ ಖಂಡಿಸಿ ನಾಳೆ ಸಿರ್ಸಿ ಬಂದ್

    ಪರೇಶ್ ಮೇಸ್ತ ಹತ್ಯೆ ಖಂಡಿಸಿ ನಾಳೆ ಸಿರ್ಸಿ ಬಂದ್

    ಕಾರವಾರ ಡಿಸೆಂಬರ್ 11: ಕುಮಟಾದಲ್ಲಿ ಇಂದು ನಡೆದ ಘರ್ಷಣೆ ಹಾಗೂ ಲಾಠಿ ಚಾರ್ಜ್ ವಿರೋಧಿಸಿ ಮತ್ತು ಪರೇಶ್ ಮೆಸ್ತ ಹತ್ಯೆ ಪ್ರಕರಣವನ್ನು ಖಂಡಿಸಿ ನಾಳೆ ಸಿರ್ಸಿ ಬಂದ್ ಗೆ ಕರೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಸಿರ್ಸಿ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಬಿಗುವಿನ ವಾತಾವರಣ ಸೃಷ್ಠಿಯಾದ ಕಾರಣ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಗೆ ವ್ಯವಸ್ಥೆ ಮಾಡಲಾಗಿದೆ.

    ಪೊಲೀಸ್ ಹಾಗೂ ಹಿಂದೂ ಸಂಘಟನೆಗಳ ನಡುವೆ ನಡೆದ ಘರ್ಷಣೆ ಹಿನ್ನಲೆಯಲಲಿ ಕುಮಟಾ ತಾಲೂಕಿನಾದ್ಯಂತ 144 ಸೆಕ್ಷನ್ ಜಾರಿ ಮಾಡಲಾಗಿದ್ದು, ಭದ್ರತೆಯ ದೃಷ್ಠಿಯಿಂದ ಹೆಚ್ಚಿನ ಪೊಲೀಸ್ ಪಡೆಯನ್ನು ಜಿಲ್ಲೆಗೆ ತರಿಸಿಕೊಳ್ಳಲಾಗಿದೆ.

    ಇತರ ಜಿಲ್ಲೆಗಳಿಂದ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಉತ್ತರ ಕನ್ನಡ ಜಿಲ್ಲೆಗೆ ಕರೆಸಲಾಗಿದ್ದು , ಉಡುಪಿ ಎಸ್ಪಿ ಸಂಜೀವ್ ಪಾಟೀಲ್, ಕುಮಟಾದಲ್ಲಿ ಮೊಕ್ಕಾಂ ಹೂಡಿದ್ದಾರೆ. ಕೊಪ್ಪಳ ಎಸ್ಪಿ ಅನೂಪ್ ಶೆಟ್ಟಿ ಸಿರ್ಸಿಯಲ್ಲಿ ಪರಿಸ್ಥಿತಿಯ ಅವಲೋಕನ ನಡೆಸಿ ಭದ್ರತೆಯ ಜವಬ್ದಾರಿ ಹೊತ್ತಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply