Connect with us

DAKSHINA KANNADA

ಪೊಲೀಸರ ಅತಿರೇಕದ ವರ್ತನೆಗೆ ವಜಾ ಅಲ್ಲ ಮನೆಗೆ ಕಳುಹಿಸಿ – ಶಾಸಕ ಭರತ್ ಶೆಟ್ಟಿ

ಪುತ್ತೂರು ಮೇ 19: ಬ್ಯಾನರ್ ವಿವಾದಕ್ಕೆ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯವನ್ನು ಶಾಸಕ ಭರತ್ ಶೆಟ್ಟಿ ಖಂಡಿಸಿದ್ದು, ಪೊಲೀಸರ ಅತಿರೇಕದ ವರ್ತನೆಗೆ ವಜಾ ಅಲ್ಲ, ಮನೆಗೆ ಕಳಿಸುವ ಕೆಲಸವನ್ಬು ಇಲಾಖೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.


ಅತ್ಯಾಚಾರವಾದರೆ, ಮಾದಕ ದ್ರವ್ಯ ಜಾಲದಲ್ಲಿ ಸಿಕ್ಕಿ ಬಿದ್ದವರಿಗೆ ಪೊಲೀಸರ ರಾಜಾತಿಥ್ಯ ಸಿಗುತ್ತದೆ. ಸನಾತನ ಧರ್ಮ ಹಿಂದುತ್ವದ ಪರ ಕೆಲಸ ಮಾಡಿದರೆ, ಇಲ್ಲವೇ ಯಾವುದೋ ದ್ವೇಷದಿಂದ ಪೊಲೀಸ್ ಇಲಾಖೆ ಲಾಠಿ ಬೀಸಿ ಕೈ ಕಾಲು ಮುರಿಯುವ ಕೆಲಸ ಮಾಡುತ್ತಿದೆ.ಹಿರಿಯ ಅಧಿಕಾರಿಗಳು ಏನು ಮಾಡುತ್ತಿದ್ದಾರೆ. ನಿಮಗೆ ತಿಳಿಯದೆ ಈ ಗಂಭೀರ ಕೃತ್ಯ ಆಗಿದೆಯೆ, ಲಾಕಪ್ ಟಾರ್ಚರ್ ವಿರುದ್ದ ಸೂಕ್ತ ತನಿಖೆ ಮಾಡಿ ತಪ್ಪಿತಸ್ಥರನ್ನು ಮನೆಗೆ ಕಳಿಸಿ, ಇತರರಿಗೆ ಇದು ಪಾಠವಾಗಬೇಕು ಎಂದು ರಾಜ್ಯದ ಪೊಲೀಸ್ ಮಹಾನಿರ್ದೇಶಕರನ್ನು ಆಗ್ರಹಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *