Connect with us

LATEST NEWS

ಪ್ರಧಾನಿ ನರೇಂದ್ರ ಮೋದಿ ನೀಚ ಜಾತಿಗೆ ಸೇರಿದ ವ್ಯಕ್ತಿ – ಕಾಂಗ್ರೇಸ್ ಮುಖಂಡ ಮಣಿಶಂಕರ್ ಅಯ್ಯರ್ ಹೇಳಿಕೆ

ಪ್ರಧಾನಿ ನರೇಂದ್ರ ಮೋದಿ ನೀಚ ಜಾತಿಗೆ ಸೇರಿದ ವ್ಯಕ್ತಿ – ಕಾಂಗ್ರೇಸ್ ಮುಖಂಡ ಮಣಿಶಂಕರ್ ಅಯ್ಯರ್ ಹೇಳಿಕೆ

ನವದೆಹಲಿ ಡಿಸೆಂಬರ್ 7:ಪ್ರಧಾನಿ ನರೇಂದ್ರ ಮೋದಿ ನೀಚ ಜಾತಿಗೆ ಸೇರಿದ ವ್ಯಕ್ತಿ ಎಂದು ಕಾಂಗ್ರೇಸ್ ಹಿರಿಯ ನಾಯಕ ಮಣಿಶಂಕರ್ ಹೇಳಿಕೆ ನೀಡಿ ವಿವಾದವನ್ನು ಮೈಮೇಲೆ ಎಳೆದು ಕೊಂಡಿದ್ದಾರೆ.

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಪ್ರಧಾನಿ ವಾಗ್ದಾಳಿ ನಡೆಸಿದ್ದಕ್ಕೆ ಪ್ರತಿಕ್ರಿಯಿಸಿದ ಮಣಿಶಂಕರ್ ಅಯ್ಯರ್, ‘ಆ ಮುನುಷ್ಯ ನೀಚ ಜಾತಿಗೆ ಸೇರಿದ ಮನುಷ್ಯ. ಅವರಿಗೆ ಯಾವುದೇ ಸಭ್ಯತೆ ಇಲ್ಲ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕಾರ್ಯಕ್ರಮದಲ್ಲಿ ರಾಜಕೀಯ ಮಾಡುವ ಅವಶ್ಯಕತೆ ಇತ್ತಾ’ ಎಂದು ಪ್ರಶ್ನಿಸಿದ್ದಾರೆ.

ದೆಹಲಿಯಲ್ಲಿ ಅಂಬೇಡ್ಕರ್ ಅಂತರಾಷ್ಟ್ರೀಯ ಕೇಂದ್ರ ಉದ್ಘಾಟಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ಬಾಬಾ ಸಾಹೇಬರ ಹೆಸರಿನಲ್ಲಿ ಮತ ಕೇಳುತ್ತಿದ್ದವರು ಈಗ ಬಾಬಾ ಬೋಲೇನಾಥ್ ನನ್ನೂ ಸ್ಮರಿಸುತ್ತಿದ್ದಾರೆ ಎಂದು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಈ ಹಿಂದೆ ಮಣಿಶಂಕರ್ ಅಯ್ಯರ್ 2014ರ ಲೋಕಸಭೆ ಚುನಾವಣೆ ವೇಳೆ ನರೇಂದ್ರ ಮೋದಿ ಅವರನ್ನು ಚಾಯ್ ವಾಲಾ ಎಂದು ಹೀಯ್ಯಾಳಿಸಿದ್ದರು ಈಗ ಇನ್ನು ಕೆಳಮಟ್ಟಕ್ಕೆ ಇಳಿದ ಮಣಿಶಂಕರ್‌ ಅಯ್ಯರ್ ಮೋದಿಯನ್ನು ಅತ್ಯಂತ ನೀಚ ಮನುಷ್ಯ ಎಂದಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *