Connect with us

DAKSHINA KANNADA

ಪ್ರಭಾಕರ್ ಭಟ್ ವಿರುದ್ಧ ಕೇಸು, ಹೈಕೋರ್ಟ್ ನಲ್ಲಿ ಮತ್ತೆ ತಡೆಯಾಜ್ಞೆ ಪಾಸು…

ಮಂಗಳೂರು,ಜುಲೈ 21: ಪ್ರಚೋದನಕಾರಿ ಭಾಷಣ ಮಾಡಿರುವ ಆರೋಪ ಹಿನ್ನಲೆಯಲ್ಲಿ RSS ಮುಖಂಡ ಕಲ್ಲಡ್ಕ ಡಾ.ಪ್ರಭಾಕರ್ ಭಟ್ ವಿರುದ್ದ ಪೋಲೀಸರು ಸಲ್ಲಿಸಿದ್ದ ಚಾರ್ಚ್ ಶೀಟ್ ಗೆ ಹೈ ಕೋರ್ಟ್ ತಡೆಯಾಜ್ಞೆ ನೀಡಿದೆ. ಬಂಟ್ವಾಳ ತಾಲೂಕಿನ ವಿಟ್ಲದ ಸಾಲೆತ್ತೂರು ಹಾಗೂ ಬಿ.ಸಿ.ರೋಡ್ ನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎನ್ನುವ ಕಾರಣಕ್ಕೆ ಮೂರು ವರ್ಷಗಳ ಹಿಂದೆ ಪ್ರಭಾಕರ್ ಭಟ್ ವಿರುದ್ಧ ದೂರನ್ನು ಮರು ತನಿಖೆಗೆ ಮುಂದಾದ ಪೋಲೀಸರು ಅವರ ವಿರುದ್ಧ ಚಾರ್ಚ್ ಶೀಟ್ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ ಚಾರ್ಚ್ ಶೀಟಗೆ ತಡೆ ನೀಡಿದ್ದು, ಪ್ರಭಾಕರ್ ಭಟ್ ವಿರುದ್ಧ ಕ್ರಮ ಜರುಗಿಸಬೇಕೆಂಬ ಸರಕಾರದ ಪ್ರಯತ್ನಕ್ಕೆ ಮತ್ತೆ ವಿಘ್ನ ಎದುರಾಗಿದೆ.

 

Share Information
Continue Reading
Advertisement
Click to comment

Leave a Reply

Your email address will not be published. Required fields are marked *