Connect with us

    DAKSHINA KANNADA

    ಮಧ್ಯರಾತ್ರಿ ಮನೆಗೆ ನುಗ್ಗಿ ಅನುಚಿತ ವರ್ತನೆ ಆರೋಪ

    ಮಂಗಳೂರು: ಮಧ್ಯರಾತ್ರಿ 2 ಗಂಟೆಗೆ ಮಹಿಳಾ ಸಿಬ್ಬಂದಿ ಇಲ್ಲದೆ, ಸುಮಾರು 50 ಪೊಲೀಸರು ಮನೆಗೆ ನುಗ್ಗಿ, ಮಹಿಳೆಯರು ಮತ್ತು ಮಕ್ಕಳ ಜತೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಬಿಜೆಪಿ ಹಿಂದುಳಿದ ಮೋರ್ಚಾ ರಾಜ್ಯ ಘಟಕದ ಕಾರ್ಯದರ್ಶಿ ಸತ್ಯಜಿತ್ ಸುರತ್ಕಲ್ ಅವರ ಪತ್ನಿ ಸವಿತಾ ಸತ್ಯಜಿತ್ ಆರೋಪಿಸಿದರು.

    ನನ್ನ ಪತಿ ಮನೆಯಲ್ಲಿ ಇರಲಿಲ್ಲ. ರಾತ್ರಿ ಹೊತ್ತು ಮನೆಗೆ ಪ್ರವೇಶಿಸಿ, ಇಡೀ ಮನೆಯನ್ನು ಶೋಧಿಸಿದ್ದಾರೆ. ಒಬ್ಬರೆ ಒಬ್ಬ ಮಹಿಳಾ ಸಿಬ್ಬಂದಿ ಇರಲಿಲ್ಲ ಎಂದು ದೂರಿದರು.

    ಹಿಂದೂ ಜಾಗರಣಾ ವೇದಿಕೆ ಕರ್ನಾಟಕ ದಕ್ಷಿಣ ಕಾರ್ಯಕಾರಿ ಸಮಿತಿ ಸದಸ್ಯ ರಾಧಾಕೃಷ್ಣ ಅಡ್ಯಂತಾಯ ಮಾತನಾಡಿ, ಮುಸ್ಲಿಂ ಭಯೋತ್ಪಾದಕರು, ಕರಾವಳಿಯ ಮೂಲಕ ಕರ್ನಾಟಕವನ್ನು ಕಾಶ್ಮೀರ ಮಾಡಲು ಹೊರಟಿದ್ದಾರೆ ಎಂದು ಆರೋಪಿಸಿದರು‌.

    Share Information
    Advertisement
    Click to comment

    You must be logged in to post a comment Login

    Leave a Reply