Connect with us

    DAKSHINA KANNADA

    ಯುಪಿ ಯಲ್ಲಿ ಸೋಲುಂಡ ಬಳಿಕ ಬಿಜೆಪಿಯ ಸ್ಟಾರ್ ಯೋಗಿ ಅದಿತ್ಯನಾಥ್ ಮಲಗಿದ್ದಾರೆ, ಇನ್ನು ಏಳೋದು ಕಷ್ಟ- ರೈ

    ಯುಪಿ ಯಲ್ಲಿ ಸೋಲುಂಡ ಬಳಿಕ ಬಿಜೆಪಿಯ ಸ್ಟಾರ್ ಯೋಗಿ ಅದಿತ್ಯನಾಥ್ ಮಲಗಿದ್ದಾರೆ, ಇನ್ನು ಏಳೋದು ಕಷ್ಟ- ರೈ

    ಪುತ್ತೂರು, ಮಾರ್ಚ್ 15: ಉತ್ತರಪ್ರದೇಶದಲ್ಲಿ ನಡೆದ ಉಪ ಚುನಾವಣೆಯಲ್ಲಿ ಸೋಲುಂಡ ಬಳಿಕ ಬಿಜೆಪಿಯ ಸ್ಟಾರ್ ಕ್ಯಾಂಪೇನರ್ ಯೋಗಿ ಆದಿತ್ಯನಾಥ ಮಲಗಿದ್ದು, ಇನ್ನು ಏಳುವುದು ಕಷ್ಟ ಎಂದು ಅರಣ್ಯ ಸಚಿವ ಬಿ.ರಮಾನಾಥ ರೈ ಹೇಳಿದರು.

    ಪುತ್ತೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಬಿಜೆಪಿ ಪಕ್ಷಕ್ಕೆ ಇತ್ತೀಚೆಗೆ ದೇಶದಾದ್ಯಂತ ನಡೆದ ಎಲ್ಲಾ ಚುನಾವಣೆಗಳಲ್ಲಿ ಸೋಲಾಗಿದೆ. ಸುಳ್ಳು ಹೇಳಿ ಜನರನ್ನು ಮೋಸ ಮಾಡಲು ಸಾಧ್ಯವಿಲ್ಲ ಎನ್ನುವುದನ್ನು ಜನತೆ ತೋರಿಸಿಕೊಟ್ಟಿದ್ದಾರೆ.

    ಉತ್ತರಪ್ರದೇಶದಲ್ಲಿ ಆದ ಈ ಬದಲಾವಣೆ ರಾಜ್ಯದಲ್ಲಿ ಮುಂದೆ ನಡೆಯುವ ಚುನಾವಣೆಗೂ ದಿಕ್ಸೂಚಿಯಾಗಲಿದೆ ಎಂದರು.

    ರಾಜ್ಯದ ಸ್ಟಾರ್ ಕ್ಯಾಂಪೇನರ್ ಎಂದು ಬಿಜೆಪಿಯವರಿಂದ ಗುರುತಿಸಲ್ಪಟ್ಟಿರುವ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೋಲಿನಿಂದ ಮಲಗಿದ್ದಾರೆ.

    ಇನ್ನು ಅವರು ಏಳುವುದು ಕಷ್ಟ ಎಂದು ಅವರು ಇದೇ ಸಂದರ್ಭದಲ್ಲಿ ವ್ಯಂಗ್ಯವಾಡಿದರು.

    ಕಾರ್ಪೋರೇಟರ್ ಪ್ರತಿಭಾ ಕುಳಾಯಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು ಪಕ್ಷದ ಆಂತರಿಕ ವಿಚಾರವನ್ನು ಪಕ್ಷದ ವೇದಿಕೆಯಲ್ಲಿ ಮಾತ್ರ ಮಾತನಾಡಬೇಕೆಂದು ಅವರು ಇದೇ ಸಂದರ್ಭದಲ್ಲಿ ಕಿವಿ ಮಾತನ್ನೂ ಹೇಳಿದರು.

    ನನ್ನ ಧರ್ಮ ಕಾಂಗ್ರೇಸ್ ಆಗಿದ್ದು, ನಾನು ಯಾವತ್ತೂ ಪಕ್ಷದ ವಿರುದ್ಧ ಮಾಧ್ಯಮಗಳ ಮುಂದೆ ಹೇಳಿಕೆ ನೀಡಲಾರೆ ಎಂದು ಪ್ರತಿಭಾ ಕುಳಾಯಿ ವಿರುದ್ಧ ತನ್ನ ಅಸಮಾಧಾನವನ್ನು ವ್ಯಕ್ತಪಡಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply