Connect with us

    LATEST NEWS

    ನವೆಂಬರ್ 15 ರಂದು ರಾಜ್ಯಮಟ್ಟದ ಸಹಕಾರ ಸಪ್ತಾಹ

    ನವೆಂಬರ್ 15 ರಂದು ರಾಜ್ಯಮಟ್ಟದ ಸಹಕಾರ ಸಪ್ತಾಹ

    ಮಂಗಳೂರು ನವೆಂಬರ್ 10: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ವತಿಯಿಂದ 64ನೇ ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮ ಮಂಗಳೂರಿನಲ್ಲಿ ನವೆಂಬರ್ 15 ರಂದು ನಡೆಯಲಿದೆ.

    ಮಂಗಳೂರಿನಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್ ರಾಜೇಂದ್ರ ಕುಮಾರ್ ಸಹಕಾರ ಸಂಸ್ಥೆಗಳು- ಉತ್ಪಾದಕರಿಂದ ಗ್ರಾಹಕರವರೆಗೆ ಎಂಬ ಧ್ಯೇಯ ವಾಕ್ಯದೊಂದಿಗೆ ಈ ಸಪ್ತಾಹ ನಡೆಯಲಿದೆ ಎಂದು ತಿಳಿಸಿದರು. ರಾಜ್ಯಮಟ್ಟದ ಸಹಕಾರ ಸಪ್ತಾಹವನ್ನು ಸಹಕಾರ ಸಚಿವ ರಮೇಶ್ ಜಾರಕಿಹೊಳಿ ಉದ್ಘಾಟಿಸಲಿದ್ದಾರೆ ಹಾಗೂ ಸಹಕಾರ ಜಾಥಾವನ್ನು ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.

    ರಾಜ್ಯಮಟ್ಟದ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ದಕ್ಷಿಣಕನ್ನಡ ಮತ್ತು ಉಡುಪಿ ಉಭಯ ಜಿಲ್ಲೆಗಳಿಂದ ಸುಮಾರು 15 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದ ರಾಜೇಂದ್ರ ಕುಮಾರ್. ಕಾರ್ಯಕ್ರಮ ಉದ್ಘಾಟನೆಗೂ ಮುನ್ನ ಎಸ್ ಸಿಡಿಸಿಸಿ ಬ್ಯಾಂಕ್ ನ ಪ್ರಧಾನ ಕಚೇರಿ ಆವರಣದಿಂದ ನೆಹರೂ ಮೈದಾನದವರೆಗೆ ಆಕರ್ಷಕ ಮರೆವಣಿಗೆ ನಡೆಯಲಿದೆ ಎಂದು ಹೇಳಿದರು.

    ಜಿಲ್ಲೆಯ ಸಹಕಾರ ಮತ್ತು ಸಂಸ್ಕೃತಿ ಬಿಂಬಿಸುವ ವಿವಿಧ ಸ್ತಬ್ದ ಚಿತ್ರಗಳು, ಡೊಳ್ಳು ಕುಣಿತ, ವೀರಗಾಸೆ, ಕೇರಳ ಚಂಡೆ, ಕಲ್ಲಡ್ಕ ಗೊಂಬೆ ಸೇರಿದಂತೆ ಸುಮಾರು 22 ವಿವಿಧ ಮನೋರಂಜನಾ ತಂಡಗಳು ಈ ಜಾಥಾದಲ್ಲಿರಲಿವೆ ಎಂದು ತಿಳಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply