LATEST NEWS
ವೈದ್ಯರ ಮುಷ್ಕರ ಸರಕಾರ ಸಲಹೆ ಕೇಳಿದರೆ ನೀಡುವೆ- ಲೋಕಾಯುಕ್ತ ವಿಶ್ವನಾಥ್ ಶೆಟ್ಟಿ
ವೈದ್ಯರ ಮುಷ್ಕರ ಸರಕಾರ ಸಲಹೆ ಕೇಳಿದರೆ ನೀಡುವೆ- ಲೋಕಾಯುಕ್ತ ವಿಶ್ವನಾಥ್ ಶೆಟ್ಟಿ
ಪುತ್ತೂರು ನವೆಂಬರ್ 16: ರಾಜ್ಯಾದ್ಯಂತ ನಡೆಯುತ್ತಿರುವ ಖಾಸಗಿ ವೈದ್ಯರ ಮುಷ್ಕರ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಲೋಕಾಯುಕ್ತ ವಿಶ್ವನಾಥ್ ಶೆಟ್ಟಿ ಈ ವಿಚಾರವನ್ನು ಜನಪ್ರತಿನಿಧಿಗಳು ಬಗೆಹರಿಸಬೇಕು, ಸರಕಾರ ನನ್ನ ಸಲಹೆ ಕೇಳಿದರೆ ಸಲಹೆ ನೀಡುವೆ, ಸರಕಾರ ಬಯಸದೆ ಸಲಹೆ ನೀಡುವುದು ಸಮಂಜಸವಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.
ಪುತ್ತೂರು ಸಬ್ ರಿಜಿಸ್ಟ್ರಾರ್ ಕಛೇರಿಯನ್ನು ಕೂಡಲೇ ಈಗಿರುವ ಸ್ಥಳದಿಂದ ವರ್ಗಾಯಿಸಲು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಹೇಳಿದರು. ಪುತ್ತೂರು ಸರಕಾರಿ ಆಸ್ಪತ್ರೆಗೆ ಸ್ಥಳದ ಅಗತ್ಯವಿದ್ದು, ಸಬ್ ರಿಜಿಸ್ಟ್ರಾರ್ ಕಛೇರಿಯ ತೆರವು ಅನಿವಾರ್ಯ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು. ಪುತ್ತೂರು ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಅವರು ಆಸ್ಪತ್ರೆಯಲ್ಲಿನ ಶುಚಿತ್ವದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
You must be logged in to post a comment Login