Connect with us

    LATEST NEWS

    ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಮಂಗಳೂರಿಗೆ ಆಗಮನ

    ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಮಂಗಳೂರಿಗೆ ಆಗಮನ

    ಮಂಗಳೂರು ನವೆಂಬರ್ 21: ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮ ಸಿಂಘೆ ಮಂಗಳೂರಿಗೆ ಆಗಮಿಸಿದ್ದಾರೆ. ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದಿಂದ ರಸ್ತೆ ಮೂಲಕ ಬುಲೆಟ್ ಪ್ರೂಫ್ ಅಂಬಾಸಿಡರ್ ಕಾರಿನಲ್ಲಿ ಮಂಗಳೂರು ನಗರಕ್ಕೆ ಆಗಮಿಸಿದ್ದಾರೆ.

    ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಬಳಿಯಿರುವ ಗೇಟ್ ವೇ ಹೊಟೇಲ್ ಗೆ ಆಗಮಿಸಿದ ಅವರು, ಅಲ್ಲಿ ಬೆಳಗ್ಗಿನ ಉಪಾಹಾರ ಸೇವಿಸಿದರು. ಶ್ರೀಲಂಕಾ ಭದ್ರತಾ ಪಡೆ ಪೂರ್ತಿಯಾಗಿ ಹೊಟೇಲ್ ಆವರಣದಲ್ಲಿ ಸುತ್ತುವರಿದಿತ್ತು. ಸ್ಥಳೀಯ ಪೊಲೀಸ್ ಅಧಿಕಾರಿಗಳಿಗೂ ಹೊಟೇಲ್ ಪ್ರವೇಶ ಇರಲಿಲ್ಲ. ಸಾರ್ವಜನಿಕರಿಗೂ ಹೊಟೇಲ್ ಪ್ರವೇಶ ನಿರ್ಬಂಧಿಸಲಾಗಿತ್ತು. ಉಪಾಹಾರದ ಬಳಿಕ ಮಂಗಳೂರಿನಿಂದ ಕೊಲ್ಲೂರಿಗೆ ಹೆಲಿಕಾಪ್ಟರ್ ಮೂಲಕ ತೆರಳಲಿದ್ದಾರೆ.

    ಕೊಲ್ಲೂರು ದೇವಸ್ಥಾನ ಸಾರ್ವಜನಿಕರಿಗೆ ಪ್ರವೇಶ ನಿಷೇಧ

    ಶ್ರೀಲಂಕಾ ಪ್ರಧಾನಿ ಕೊಲ್ಲೂರು ಭೇಟಿ ಹಿನ್ನೆಲೆ ಕೊಲ್ಲೂರು ದೇವಸ್ಥಾನಕ್ಕೆ ಸಾರ್ವಜನಿಕರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ಸಾರ್ವಜನಿಕರಿಗೆ ದೇವಸ್ಥಾನ ಪ್ರವೇಶನ್ನುನಿರ್ಬಂಧಿಸಲಾಗಿದೆ. ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮ ಸಿಂಘೆ ಮೂಕಾಂಬಿಕಾ ದೇವಿ ದರ್ಶನ ಪಡೆಯಲಿದ್ದು ಶತಚಂಡಿಯಾಗದಲ್ಲಿ ಪಾಲ್ಗೊಳ್ಳಲಿದ್ದಾರೆ. ದೇವರ ಹರಕೆಯನ್ನು ತೀರಿಸಲೆಂದು ಕೊಲ್ಲೂರಿಗೆ ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮ ಸಿಂಘೆ ಆಗಮಿಸಿದ್ದಾರೆ. ಕಳೆದ ಬಾರಿ ಕೊಲ್ಲೂರಿಗೆ ಆಗಮಿಸಿದ್ದ ಸಂದರ್ಭದಲ್ಲಿ ಹವಾಮಾನ ವೈಪರೀತ್ಯದಿಂದ ಹಿಂದಿರುಗಿದ್ದರು. ಶ್ರೀಲಂಕಾ ಪ್ರಧಾನಿ ಅವರನ್ನು ಸ್ವಾಗತಿಸಲು ದೇವಸ್ಥಾನದ ಆಡಳಿತ ಮಂಡಳಿ ಸಜ್ಜಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply