Connect with us

    LATEST NEWS

    ರಾಜಕೀಯ ಮುಕ್ತವಾಗಿ ಸಹಕಾರಿ ರಂಗ ಕಾರ್ಯನಿರ್ವಹಿಸಬೇಕು – ರಮೇಶ್ ಜಾರಕಿಹೊಳಿ

    ರಾಜಕೀಯ ಮುಕ್ತವಾಗಿ ಸಹಕಾರಿ ರಂಗ ಕಾರ್ಯನಿರ್ವಹಿಸಬೇಕು – ರಮೇಶ್ ಜಾರಕಿಹೊಳಿ

    ಮಂಗಳೂರು ನವೆಂಬರ್ 15: ಸಹಕಾರಿ ರಂಗದಲ್ಲಿ ರಾಜಕೀಯವನ್ನು ಮಾಡದೆ, ಸುಳ್ಳು ಪ್ರಚಾರಗಳಿಗೆ ಕಿವಿಗೊಡದೆ ಕಾರ್ಯನಿರ್ವಹಿಸಬೇಕೆಂದು ರಾಜ್ಯಸಹಕಾರಿ ಸಚಿವ ರಮೇಶ್ ಜಾರಕಿಹೊಳಿ ಕರೆ ನೀಡಿದ್ದಾರೆ.

    ಮಂಗಳೂರಿನಲ್ಲಿ ಇಂದು ಆಯೋಜಿಸಲಾಗಿದ್ದ 64ನೇ ಅಖಿಲ ಭಾರತ ಸಹಕಾರ ಸಪ್ತಾಹದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಸಹಕಾರಿ ರಂಗದಲ್ಲಿ ಗುಜರಾತ್, ಮಹಾರಾಷ್ಟ್ರವನ್ನು ಹೊರತುಪಡಿಸಿದರೆ, ಕರ್ನಾಟಕ ನಂತರದ ಸ್ಥಾನದಲ್ಲಿದೆ. ಇದನ್ನು ಮೊದಲ ಸ್ಥಾನಕ್ಕೆ ತರುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಅವರು ಕರೆನೀಡಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ವಿ.ಸದಾನಂದ ಗೌಡ , ನೋಟು ಅಮಾನ್ಯ ಹಾಗೂ ಜಿಎಸ್‍ಟಿ ಜಾರಿ ಮೂಲಕ ದೇಶದಲ್ಲಿ ಆರ್ಥಿಕ ಅಶಿಸ್ತು ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ದಿಟ್ಟ ಕ್ರಮವನ್ನು ಕೈಗೊಂಡಿದೆ ಎಂದು  ಹೇಳಿದರು.
    ಕಾರ್ಯಕ್ರಮ ದ ಅಂಗವಾಗಿ ಉತ್ತಮ ಸಹಕಾರ ಸಂಘಗಳಿಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಪ್ರಶಸ್ತಿ ಪ್ರದಾನ ಮಾಡಿದರು.

    Share Information
    Advertisement
    Click to comment

    You must be logged in to post a comment Login

    Leave a Reply