Connect with us

    LATEST NEWS

    ಸಾಹಿತ್ಯ ಅಕಾಡಮಿ ಪ್ರಶಸ್ತಿ ಪ್ರಕಟ: ವಿವೇಕ ರೈ, ವೆಂಕಟೇಶಮೂರ್ತಿ ಸೇರಿ ಐವರಿಗೆ ಗೌರವ ಪುರಸ್ಕಾರ

    ಸಾಹಿತ್ಯ ಅಕಾಡಮಿ ಪ್ರಶಸ್ತಿ ಪ್ರಕಟ: ವಿವೇಕ ರೈ, ವೆಂಕಟೇಶಮೂರ್ತಿ ಸೇರಿ ಐವರಿಗೆ ಗೌರವ ಪುರಸ್ಕಾರ

    ಬೆಂಗಳೂರು, ಫೆಬ್ರವರಿ 08 : ಕರ್ನಾಟಕ ಸಾಹಿತ್ಯ ಅಕಾಡಮಿ ವಾರ್ಷಿಕ ಪ್ರಶಸ್ತಿಗಳು ಪ್ರಕಟವಾಗಿದೆ. ಈ ಬಾರಿಯ ಪ್ರಶಸ್ತಿಗೆ ಹಿರಿಯ ಸಂಶೋಧಕ, ಸಾಹಿತಿ ಪ್ರೊ. ಬಿ.ಎ. ವಿವೇಕ ರೈ, ಸಾಹಿತಿ ಎಚ್.ಎಸ್. ವೆಂಕಟೇಶಮೂರ್ತಿ ಸೇರಿ ಐವರಿಗೆ ಸಾಹಿತ್ಯ ಅಕಾಡಮಿ ಗೌರವ ಪುರಸ್ಕಾರ ಲಭಿಸಿದೆ.

    ಇದೇ ವೇಳೆ ಸಾಹಿತಿ,ಡಾ. ಪುರುಷೋತ್ತಮ ಬಿಳಿಮಲೆ ಅವರಿಗೆ “ಸಾಹಿತ್ಯ ಶ್ರೀ” ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಕನ್ನಡ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಕಾಡಮಿ ಅಧ್ಯಕ್ಷ ಅರವಿಂದ ಮಾಲಗತ್ತಿ 2018- 19ನೇ ಸಾಲಿನ ಪ್ರಶಸ್ತಿ ವಿಜೇತರ ಹೆಸರುಗಳನ್ನು ಘೋಷಿಸಿದರು.
    ತಲಾ 50 ಸಾವಿರ ನಗದು, ಪ್ರಶಸ್ತಿ ಪತ್ರಗಳನ್ನು ಒಳಗೊಂಡಿರುವ ಗೌರವ ಪ್ರಶಸ್ತಿಗೆ ಎಚ್.ಎಸ್. ವೆಂಕಟೇಶಮೂರ್ತಿ, ಬಿ.ಎ. ವಿವೇಕ ರೈ, ದೇಶಾಂಶ ಹುಡಗಿ, ಕಾದಂಬರಿಗಾರ್ತಿ ಸಾಯಿಸುತೆ, ಪ್ರೊ. ಎ.ಕೆ. ಹಂಪಣ್ಣ ಭಾಜನರಾಗಿದ್ದಾರೆ.
    ಕನ್ನಡ ಸಾಹಿತ್ಯ ಮತ್ತು ಬೆಳವಣಿಗೆಗೆ ಕಾರಣರಾಗಿರುವ ಡಿಜಿಟಲ್ ಮಾಧ್ಯಮಕ್ಕೂ ಈ ಬಾರಿ ಪ್ರಶಸ್ತಿ ಘೋಷಣೆಯಾಗಿದ್ದು, ಮುದ್ರಣದಲ್ಲಿ ಪ್ರಜಾವಾಣಿ ಆಯ್ಕೆಯಾದರೆ , ಡಿಜಿಟಲ್ ಮಾದ್ಯಮದಲ್ಲಿ ಅವಧಿ.ಕಾಂ ಗೆ 25 ಸಾವಿ ರೂ. ನಗದು, ಪಶಸ್ತಿ ಫಲಕಗಳನ್ನೊಳಗೊಂಡ ಪುರಸ್ಕಾರ ಲಭಿಸಿದೆ.
    10 ಸಾವಿರ ನಗದು, ಪ್ರಶಸ್ತಿ ಪತ್ರವನ್ನೊಳಗೊಂಡ “ಸಾಹಿತ್ಯ ಶ್ರೀ” ಪ್ರಶಸ್ತಿಗೆ ಪುರುಷೋತ್ತಮ ಬಿಳಿಮಲೆ, ಎಚ್.ಎಲ್. ಪುಷ್ಪ, ಕೆ.ಸಿ. ಶಿವಪ್ಪ, ಸಿ.ಪಿ. ಸಿದ್ದಾಶ್ರಮ, ಪಾರ್ವತಿ ಜಿ. ಐತಾಳ್, ಜಿ. ಕೃಷ್ಣಪ್ಪ, ಸತೀಶ್ ಕುಲಕರ್ಣಿ, ಅಬ್ದುಲ್ ಜಿ. ಬಷೀರ್ ಹಾಗೂ ಗಂಗಾರಾಮ್ ಚಂಡಾಳ ಅವರುಗಳು ಆಯ್ಕೆಯಾಗಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply