ಸುರತ್ಕಲ್, ಮೇ 19: ಸುರತ್ಕಲ್ ಲೈಟ್ ಹೌಸ್ ಬೀಚ್ ರಸ್ತೆ ಸಂಪೂರ್ಣ ವಾಗಿ ಚಂಡಮಾರತದ ಹೊಡೆತಕ್ಕೆ ಸಮುದ್ರಪಾಲಾಗಿದ್ದು ಶಾಸಕ ಡಾ.ಭರತ್ ಶೆಟ್ಟಿ ವೈ ಭೇಟಿ ನೀಡಿ ಪಾಲಿಕೆ ಅಧಿಕಾರಿಗಳನ್ನು ಹಾನಿಗೀಡಾದ ಪ್ರದೇಶಕ್ಕೆ ಕರೆಸಿ ಮಾತುಕತೆ ನಡೆಸಿಸರು.
ನಬಾರ್ಡ್ ಅನುದಾನದಿಂದ ಹೊಸ ರಸ್ತೆ ಈ ಭಾಗದಲ್ಲಿ ನಿರ್ಮಿಸಲಾಗಿತ್ತು.ಇದೀಗ ಸರಕಾರದ ಪ್ರಕೃತಿ ವಿಕೋಪ ಪರಿಹಾರ ಅನುದಾನ ಹಾಗೂ ಪ್ರವಾಸೋಧ್ಯಮಕ್ಕೆ ಅನುಕೂಲವಾಗುವಂತೆ ವಿಶೇಷ ಅನುದಾನ ತರುವ ಬಗ್ಗೆ ಮುಖ್ಯಮಂತ್ರಿಗಳಲ್ಲಿ ಚರ್ಚಿಸಲಾಗುವುದು ಎಂದು ಸ್ಥಳೀಯರಿಗೆ ಭರವಸೆ ನೀಡಿದ್ದಾರೆ.
Video: