KARNATAKA
ನೀರಿನ ತೊಟ್ಟಿಗೆ ಬಿದ್ದು 11 ತಿಂಗಳ ಮಗು ಸಾವು….!!
ಶಿವಮೊಗ್ಗ ಸೆಪ್ಟೆಂಬರ್ 26: ನೀರಿನ ತೊಟ್ಟಿಗೆ 11 ತಿಂಗಳ ಮಗು ಬಿದ್ದು ಸಾವನಪ್ಪಿರುವ ಘಟನೆ ಶಿವಮೊಗ್ಗದ ಶಿಕಾರಿಪುರ ತಾಲೂಕಿನ ಚಿಕ್ಕಜೋಗಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಚಿಕ್ಕಜೋಗಿಹಳ್ಳಿಯ ಛಾಯಾಗ್ರಾಹಕ ದೇವರಾಜ್ ಹಾಗೂ ಅನುಷಾ ದಂಪತಿಯ ಮಗ 11 ತಿಂಗಳ ಅಕ್ಷಯ್ ನೀರಿನ ತೊಟ್ಟಿಗೆ ಬಿದ್ದ ದುರ್ದೈವಿ ಮಗು. ಮುಂದಿನ ವಾರ ಒಂದನೇ ವರ್ಷಕ್ಕೆ ಕಾಲಿಡುತ್ತಿದ್ದು ಅಕ್ಷಯ್ ಎಂಬ 11 ತಿಂಗಳು ಮಗು ಮನೆಯ ಮುಂದಿನ ತೊಟ್ಟಿಯಲ್ಲಿ ಬಿದ್ದು ಸಾವನ್ನಪ್ಪಿದೆ. ಮೊದಲ ವರ್ಷದ ಹುಟ್ಟು ಹಬ್ಬ ಆಚರಿಸುವ ಮುನ್ನವೇ 11 ತಿಂಗಳ ಮದು ಅಕ್ಷಯ್ ಇಹಲೋಕ ತ್ಯಜಿಸಿರುವುದು ಪೋಷಕರ ಆಕ್ರಂದನಕ್ಕೆ ಕಾರಣವಾಗಿದೆ.
ಮಹಾಲಯ ಅಮವಾಸ್ಯೆ ಕಾರಣ ಕುಟುಂಬಸ್ಥರು ವಾಹನ ತೊಳೆಯಲು ಪೂಜೆ ಮಾಡುವ ಕಡೆ ಗಮನ ಕೊಟ್ಟ ಸಂದರ್ಭದಲ್ಲಿ ಅಂಬೆಗಾಲು ಇಡುತ್ತಿದ್ದ ಮಗು ಅರಿವಿಲ್ಲದೆ ತೊಟ್ಟಿಗೆ ಬಿದ್ದು ಮೃತಪಟ್ಟಿದೆ ಎನ್ನಲಾಗಿದೆ. ಸ್ವಲ್ಪ ಹೊತ್ತಿನ ನಂತರ ಮಗುವಿನ ತಾತ ವಾಹನ ತೊಳೆಯಲು ಬಂದಾಗ ತೊಟ್ಟಿಯಲ್ಲಿ ಮಗುವನ್ನು ನೋಡಿದ್ದಾರೆ. ತಕ್ಷಣ ಶಿಕಾರಿಪುರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತಾದರೂ ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ.
You must be logged in to post a comment Login