Connect with us

LATEST NEWS

ಖಾಸಗಿ ಬಸ್ ಮತ್ತು ಟ್ಯಾಂಕರ್ ನಡುವೆ ಭೀಕರ ರಸ್ತೆ ಅಪಘಾತ 12 ಮಂದಿ ಸಜೀವ ದಹನ

ರಾಜಸ್ಥಾನ ನವೆಂಬರ್ 10: ಖಾಸಗಿ ಬಸ್ ಮತ್ತು ಟ್ಯಾಂಕರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬಸ್ ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ 12 ಮಂದಿ ಸಜೀವ ದಹನವಾಗಿರುವ ಘಟನೆ ರಾಜಸ್ಥಾನದ ಬಾರ್ಮರ್ ಜೋಧ್‍ಪುರ ಹೆದ್ದಾರಿಯಲ್ಲಿ ನಡೆದಿದೆ.


ಅಪಘಾತಕ್ಕೀಡಾದ ಬಸ್ ಬಲೋತ್ರಾದಿಂದ ಬೆಳಗ್ಗೆ 9.55 ಸುಮಾರಿಗೆ ಹೊರಟಿತ್ತು. ಟ್ಯಾಂಕರ್ ಚಾಲಕ ರಸ್ತೆಯ ತಪ್ಪಾದ ಬದಿಯಲ್ಲಿ ವಾಹನ ಚಲಾಯಿಸಿಕೊಂಡು ಬಂದಿದ್ದೇ ಅಪಘಾತಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಟ್ಯಾಂಕರ್ ಡಿಕ್ಕಿಯಾಗುತ್ತಿದ್ದಂತೆ ಒಮ್ಮೆಲೇ ಬಸ್‍ಗೆ ಬೆಂಕಿ ತಗುಲಿದೆ. ಬಸ್ ನಲ್ಲಿದ್ದ 12 ಮಂದಿ ಸಜೀವ ದಹನವಾಗಿದ್ದಾರೆ. ಅನೇಕ ಮಂದಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.


ಬಾರ್ಮರ್ ಜಿಲ್ಲಾಧಿಕಾರಿಯೊಟ್ಟಿಗೆ ಮಾತನಾಡಿದ್ದೇನೆ. ರಕ್ಷಣಾ ಕಾರ್ಯಾಚರಣೆ ಕುರಿತಾಗಿ ಅವರಿಗೆ ನಿರ್ದೇಶನ ನೀಡಲಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಎಲ್ಲ ವ್ಯವಸ್ಥೆ ಮಾಡಲಾಗುವುದು. ಅಪಘಾತದಲ್ಲಿ 12 ಮಂದಿ ಮೃತರಾದವರಿಗೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *