Connect with us

    National

    ಯುವಕನ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿ ವಿದ್ಯಾರ್ಥಿನಿ ಜೀವಾಂತ್ಯ..!

    ಕಾಸರಗೋಡು: ಯುವಕನ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಕಾಸರಗೋಡಿನ  ಬದಿಯಡ್ಕದಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಯುವಕ ನನ್ನು ಪೊಲೀಸರು ಬಂಧಿಸಿದ್ದಾರೆ. ಕುಂಬ್ಧಾಜೆ ನಿವಾಸಿ ಫಾತಿಮ್ಮತ್ ಮುನ್ಸಿಯಾ ರಿಲ್ವಾನ(15) ಮೃತ ಪಟ್ಟ ಯುವತಿಯಾಗಿದ್ದಾಳೆ.

    ಬದಿಯಡ್ಕ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿಯಾಗಿದ್ದಳು. ಇಲಿವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಈಕೆಯನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿ ಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಂದು ಮುಂಜಾನೆ ಮೃತಪಟ್ಟಿದ್ದಾಳೆ.

    ಈ ಸಂಬಂಧ ಕೋಟೆಗುಡ್ಡೆಯ ಅನ್ವರ್ (24) ಎಂಬಾತನನ್ನು ಬದಿಯಡ್ಕ ಠಾಣಾ ಪೊಲೀಸರು ಬಂಧಿಸಿದ್ದು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿ ದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ.

    ವಿವಾಹ ವಾಗುವಂತೆ ಈತ ನಿರಂತರ ಬೆದರಿಕೆಯೊಡ್ಡುತ್ತಿದ್ದ ಎನ್ನಲಾಗಿದ್ದು ಆತ್ಮಹತ್ಯೆ ಪ್ರೇರಣೆ ಮೊದಲಾದ ಮೊಕದ್ದಮೆ ಗಳ ನ್ನು ಹೂಡಲಾಗಿದೆ. ಕಳೆದ ಗುರುವಾರ ಸಂಜೆ ಮುನ್ಸಿಯಾ ಮನೆಯಲ್ಲಿ ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದ ಸಂದರ್ಭದಲ್ಲಿ ಯುವತಿ ಯಿಂದ ಪೊಲೀಸರು ಮಾಹಿತಿ ಕಲೆ ಹಾಕಿದ್ದರು. ಶಾಲೆಗೆ ನಡೆದುಕೊಂಡು ಹೋಗುತ್ತಿದ್ದಾಗ ಈತ ಕಿರುಕುಳ ನೀಡುತ್ತಿದ್ದನು ಎನ್ನಲಾಗಿದೆ.

    ಈ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದ್ದು, ಆರೋಪಿ ಅನ್ವರ್ ಗೆ ಒತ್ತಾಸೆ ನೀಡಿದ್ದ ಇನ್ನಿಬ್ಬರ ಬಗ್ಗೆಯೂ ಪೊಲೀಸರಿಗೆ ಮಾಹಿತಿ ಲಭಿಸಿದೆ ತನಿಖೆ ಮುಂದುವರೆದಿದೆ.

    Share Information
    Advertisement
    Click to comment

    You must be logged in to post a comment Login

    Leave a Reply