Connect with us

    LATEST NEWS

    ಉಡುಪಿ : 10ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ..!

    ಉಡುಪಿ : ಉಡುಪಿ ಜಿಲ್ಲೆಯ ಶಿರ್ವದಲ್ಲಿ 10 ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೋರ್ವಳು ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ.

    ಇಲ್ಲಿನ ಮೂಡುಬೆಳ್ಳೆ ಸಂತ ಲಾರೆನ್ಸ್ ಕನ್ನಡ ಮಾಧ್ಯಮ ಪ್ರೌಢ ಶಾಲಾ 10ನೇ ತರಗತಿ ವಿದ್ಯಾರ್ಥಿನಿ ಭಾಗ್ಯಶ್ರೀ (16)  ಇಂದು (ಬುಧವಾರ) ಹೃದಯಾಘಾತದಿಂದ ನಿಧನಳಾಗಿದ್ದಾಳೆ.

    ಎಂದಿನಂತೆ ಶಾಲೆಗೆ ಹೋಗುತ್ತಿದ್ದ ಭಾಗ್ಯಶ್ರೀಗೆ ಇಂದು ಬೆಳಿಗ್ಗೆ ಎದೆ ನೋವು ಕಾಣಿಸಿದ್ದು ಕೂಡಲೇ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಭಾಗ್ಯಶ್ರೀ ನಿಧನ ಹೊಂದಿದ್ದಾಳೆ.  ಇವಳಿಗೆ ಹೃದಯ ಸಂಬಂಧಿ ಕಾಯಿಲೆ ಇತ್ತು. ಇವಳು ಪಳ್ಳಿ ದಾದಬೆಟ್ಟು ಜಯರಾಮ ಆಚಾರ್ಯ ಚಂದ್ರಿಕಾ ದಂಪತಿಗಳ ಪುತ್ರಿ. ಇವಳ ನಿಧನಕ್ಕೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಶಿಕ್ಷಕರು,ವಿದ್ಯಾರ್ಥಿ ವೃಂದದವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೃತ ಭಾಗ್ಯಶ್ರೀ ಗೌರವಾರ್ಥ ಇಂದು ಶಾಲೆಗೆ ರಜೆ ನೀಡಲಾಗಿತ್ತು.

    Share Information
    Advertisement
    Click to comment

    You must be logged in to post a comment Login

    Leave a Reply