LATEST NEWS
ಅಂತ್ಯಸಂಸ್ಕಾರ ಮಾಡಲು ಬಂದಿದ್ದವರ ಮೇಲೆ ಛಾವಣಿ ಕುಸಿತ! 18 ಮಂದಿ ಸಾವು
ಗಾಜಿಯಾಬಾದ್, ಜನವರಿ 03: ಮರಣಹೊಂದಿದ ಸಂಬಂಧಿಯ ಅಂತ್ಯಸಂಸ್ಕಾರ ಮಾಡಲು ಬಂದಿದ್ದ ಸಂಬಂಧಿಕರು ದುರ್ಮರಣ ಹೊಂದಿರುವ ಘಟನೆ ದೆಹಲಿ ಸಮೀಪದ ಗಾಜಿಯಾಬಾದ್ನಲ್ಲಿ ನಡೆದಿದೆ. ಈಗಾಗಲೇ 18 ಜನರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಗಾಜಿಯಾಬಾದ್ನ ಮುರಾದ್ನಗರದಲ್ಲಿ ಇಂತದ್ದೊಂದು ದುರ್ಘಟನೆ ನಡೆದಿದೆ. ಉಖಲಾರ್ಸಿ ಗ್ರಾಮದ ವ್ಯಕ್ತಿಯೊಬ್ಬ ಮೃತನಾಗಿದ್ದ. ಆತನ ಅಂತ್ಯಸಂಸ್ಕಾರ ನಡೆಸಲೆಂದು ಸಂಬಂಧಿಕರು ಭಾನುವಾರ ಬೆಳಗ್ಗೆ ಶವಾಗಾರಕ್ಕೆ ಬಂದಿದ್ದಾರೆ. ಅಂತ್ಯಕ್ರಿಯೆ ನಡೆಸುವ ವೇಳೆಯಲ್ಲಿ ಜೋರಾಗಿ ಮಳೆ ಸುರಿದಿದೆ. ಆ ಹಿನ್ನೆಲೆಯಲ್ಲಿ ಎಲ್ಲರೂ ಅಲ್ಲಿನ ಛಾವಣಿಯ ಒಳಗೆ ಸೇರಿಕೊಂಡಿದ್ದಾರೆ. ಈ ವೇಳೆ ಭಾರೀ ಮಳೆಗೆ ಛಾವಣಿ ಕುಸಿದುಬಿದ್ದಿದೆ.
ಛಾವಣಿಯ ಅಡಿ ಕನಿಷ್ಠ 24 ಮಂದಿ ಇದ್ದರು ಎನ್ನಲಾಗಿದೆ. ಸ್ಥಳಕ್ಕೆ ಗಾಜಿಯಾಬಾದ್ ಪೊಲೀಸರು ಮತ್ತು ಎನ್ಡಿಆರ್ಎಫ್ನ ರಕ್ಷಣಾ ತಂಡ ಬಂದಿದ್ದು, ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ. ಈವರೆಗೆ 18 ಮಂದಿಯ ಮೃತ ದೇಹವನ್ನು ಹೊರತೆಗೆಯಲಾಗಿದೆ. ಛಾವಣಿಯ ಅವಶೇಷಗಳ ಅಡಿ ಇನ್ನಷ್ಟು ಜನರಿದ್ದು ಅವರನ್ನು ಹೊರತೆಗೆಯಲು ಹರಸಾಹಸ ಮಾಡಲಾಗುತ್ತಿದೆ. ಗಾಯಾಳಯಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ ಸಂತಾಪ ಸೂಚಿಸಿದ್ದಾರೆ.
You must be logged in to post a comment Login