DAKSHINA KANNADA
ವಾಣಿಜ್ಯ ವಿಭಾಗದಲ್ಲಿ ದ.ಕ. ಜಿಲ್ಲೆಗೆ ಟಾಪರ್ ತುಳಸಿ ಪೈ ಮನದಾಳದ ಮಾತು’ರಾಜ್ಯದಲ್ಲಿ ದ್ವಿತೀಯ ರ್ಯಾಂಕ್ ನಿರೀಕ್ಷೆ ಇರಲಿಲ್ಲ’..!
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಮಂಗಳೂರು: ರಾಜ್ಯ ಮಟ್ಟದಲ್ಲಿ ದ್ವಿತೀಯ ರ್ಯಾಂಕ್ ಬರುವುದೆಂದು ನಿರೀಕ್ಷೆ ಇರಲಿಲ್ಲ, 595 ಕ್ಕಿಂತ ಹೆಚ್ಚು ಅಂಕ ಬರಬಹುದೆಂಬ ನಿರೀಕ್ಷೆ ಇತ್ತು. ಎಂದು ವಾಣಿಜ್ಯ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ ದ್ವಿತೀಯ ರ್ಯಾಂಕ್ ಪಡೆದ ಮಂಗಳೂರಿನ ಕೆನರಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ತುಳಸಿ ಪೈ ಸಂತಸ ಹಂಚಿಕೊಂಡಿದ್ದಾರೆ.
ಉದ್ಯಮಿ ವಿವೇಕ್ ಪೈ ಮತ್ತು ವಿನಿತಾ ದಂಪತಿಯ ಪುತ್ರಿ ತುಳಸಿ ಪೈ 596 ಅಂಕ ಗಳಿಸಿ ವಾಣಿಜ್ಯ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ ರ್ಯಾಂಕ್ ಪಡೆದಿದ್ದಾರೆ. ‘ಮುಂದೆ ಚಾರ್ಟರ್ಡ್ ಅಕೌಂಟೆಂಟ್ ಆಗುವ ಕನಸಿದೆ. ನಾನು ಈವರೆಗೆ ಯಾವುದೇ ಟ್ಯೂಷನ್ ಹೋಗಿಲ್ಲ. ದಿನದಲ್ಲಿ ನಾಲ್ಕೈದು ತಾಸು ಅಭ್ಯಾಸ ಮಾಡುತ್ತಿದ್ದೆ. ಓದಿದ್ದನ್ನು ಸರಿಯಾಗಿ ಮನದಟ್ಟು ಮಾಡಿಕೊಳ್ಳುತ್ತಿದ್ದೆ. ಎಸ್ಸೆಸ್ಸೆಲ್ಸಿ ಯಲ್ಲಿ 625ಕ್ಕೆ 624 ಅಂಕ ಬಂದಿತ್ತು ಎಂದು ತುಳಸಿ ಸಂತಸ ವ್ಯಕ್ತಪಡಿಸಿದರು.
ಇದೇ ಕಾಲೇಜಿನ ಮತ್ತೋರ್ವ ವಿದ್ಯಾರ್ಥಿನಿ ಸಮೃದ್ಧಿ 594 ಅಂಕ ಪಡೆದು ರಾಜ್ಯ ಮಟ್ಟದಲ್ಲಿ ನಾಲ್ಕನೇ ರ್ಯಾಂಕ್ ಪಡೆದಿದ್ದಾರೆ.ಈಕೆ ಉದ್ಯಮಿ ಶರತ್ ನಾಯಕ್ ಮತ್ತು ಲಲಿತಾ ಪ್ರಿಯಾ ದಂಪತಿ ಪುತ್ರಿಯಾಗಿರುವ ಸಮೃದ್ದಿ ಪರೀಕ್ಷೆಗೆ ಎರಡು ತಿಂಗಳು ಮೊದಲಿನಿಂದ ದಿನಕ್ಕೆ ಐದಾರು ತಾಸು ಅಭ್ಯಾಸ ಮಾಡುತ್ತಿದ್ದೆ. ಸಾಕಷ್ಟು ಶ್ರಮವಹಿಸಿ ಓದಿದ್ದಕ್ಕೆ ಉತ್ತಮ ಫಲಿತಾಂಶ ಬಂದಿದೆ ಎಂದು ಪ್ರತಿಕ್ರಿಯಿಸಿದರು.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
.
You must be logged in to post a comment Login